4:16 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ನಿಂದ ಪ್ರತಿರೋಧ; ಕದ್ರಿ ಎಸ್ ಐ ಟೋಪಿ ಹಾರಿಸಿದ ಪುಂಡರು

07/01/2022, 11:13

ಮಂಗಳೂರು(reporterkarnataka.com): ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿ ನಿಂತು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಕದ್ರಿ ಸಬ್ ಇನ್ಸ್‌ಪೆಕ್ಟರ್ ಅವರ ಟೋಪಿ ಹಾರಿಸಿದ ಘಟನೆಯೂ ನಡೆಯಿತು.


ಪಂಜಾಬ್ ನ  ಕಾಂಗ್ರೆಸ್ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ಒದಗಿಸಿಲ್ಲ ಎಂದು ಆರೋಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವತಿಯಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ಪ್ರತಿರೋಧದ ಪ್ರತಿಭಟನೆಯೂ ನಡೆಯಿತು. ಉಭಯ ಪಕ್ಷದ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಉಭಯ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ಪಕ್ಷದ ಬಾವುಟವನ್ನು ಎತ್ತಿ ತಿರುಗಿಸುತ್ತಾ ಘೋಷಣೆ ಕೂಗಿದರು. 

ಈ ಸಂದರ್ಭದಲ್ಲಿ  ವ್ಯಕ್ತಿಯೊಬ್ಬ ಕದ್ರಿ ಪೊಲೀಸ್ ಠಾಣೆ ಎಸ್ಐ ಅವರ ತಲೆ ಮೇಲಿನ ಟೊಪ್ಪಿ ಹಾರಿಸಿದರು. ಇದಕ್ಕೂ ಮುನ್ನ ಎಸ್ ಐ ಅವರನ್ನು ಬೆನ್ನು ದಬ್ಬುವ ಪ್ರಯತ್ನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು