12:08 PM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮಲ್ಲೂರು: 90 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

16/01/2023, 22:32

ಮಲ್ಲೂರು(reporterkarnataka.com): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 12ಕ್ಕೂ ಅಧಿಕ ಕಡೆ 90 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಜನಪರ ಅಭಿವೃದ್ಧಿ ಕಾಮಗಾರಿ ನಡೆಸಲು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಬಿಜೆಪಿ ಮುಖಂಡ ಸುಹಾನ್ ಆಳ್ವ ಅವರು ಮಾತನಾಡಿ, ಶಾಸಕರು ಅಂದಾಜು 3 ಕೋಟಿ ರೂ. ಅನುದಾನ ಈ ಗ್ರಾಮಕ್ಕೆ ನೀಡಿದ್ದಾರೆ. 5 ಲಕ್ಷ ರೂ.ಶ್ಮಶಾನ ಅಭಿವೃದ್ಧಿಗೂ ನೀಡುವುದಾಗಿ ಹೇಳಿದ್ದಾರೆ. ಗ್ರಾಮಸ್ಥರ ಪರವಾಗಿ ಶಾಸಕರನ್ನು ಅಭಿನಂದಿಸುವುದಾಗಿ ಹೇಳಿದರು.

ಈ ಸಂದರ್ಭ ಅಭಿವೃದ್ಧಿ ಕಾಮಗಾರಿ ನಡೆಸಲು ಜನರ ಸಹಕಾರವಿದ್ದಾಗ ಸಾಧ್ಯವಾಗುತ್ತದೆ. ಜನರ ಬಹುಬೇಡಿಕೆಯ ಕುಡಿಯುವ ನೀರಿನ ಯೋಜನೆ ಜಲಜೀವನ್ ಮಿಷನ್ ಕಾಮಗಾರಿ ಪ್ರಗತಿಯಲ್ಲಿದೆ. ಬೋರ್ ವೆಲ್ ಜತೆಗೆ ಬಹುಗ್ರಾಮ ಕುಡಿಯುವ ನೀರಿಗೆ ಯೋಜನೆಗೆ ಬಂಟ್ವಾಳ, ಮೂಲ್ಕಿ ಮೂಡಬಿದ್ರೆ ಕ್ಷೇತ್ರ ಶಾಸಕರ ಸಹಿತ ಹೆಚ್ಚುವರಿಯಾಗಿ ಅನುದಾನ ಪಡೆದು ನದಿಯಿಂದ ಕುಡಿಯುವ ನೀರಿನ ಸಂಪರ್ಕ ಯೋಜನೆಗೆ ಒತ್ತು ನೀಡಲಾಗಿದೆ.ಇದರಿಂದ ನೀರಿನ ಕೊರತೆ ನಿವಾರಿಸಬಹುದಾಗಿದೆ ಎಂದರು.

ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಎ. ಇಸ್ಮಾಯಿಲ್, ಪಂಚಾಯತ್ ಸದಸ್ಯೆ ಸುಮಾ ಶೆಟ್ಟಿ,ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖ್ ಸುಹಾನ್ ಆಳ್ವ,ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮದ ಜನರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು