ಇತ್ತೀಚಿನ ಸುದ್ದಿ
ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿ
28/02/2026, 15:19
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ನಿರಂತರ ಕಾಡಾನೆ ದಾಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದು, ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಇಂದು ಕಾಡಾನೆ ದಾಳಿ ಪ್ರದೇಶಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿಯಾಗಲಿದ್ದು, ರೈತರು ಗ್ರಾಮಸ್ಥರ ಜೊತೆ ಸಂವಾದ ನಡೆಸಲಿದ್ದಾರೆ. ರೈತರ ಜೊತೆ ಅರಣ್ಯ ಸಚಿವ ಮಾತಕತೆ ನಡೆಸುವಂತೆ ಮಲೆನಾಡಿಗರು ಆಗ್ರಹಿಸಿದ್ದರು. ಅಧಿಕಾರಿಗಳು ಕೊಡೋ ಕಾರಣವೇ ಪರಿಹಾರವಲ್ಲ, ರೈತರ ಜೊತೆ ಚರ್ಚಿಸಿ ಎಂದು ಮಲೆನಾಡಿಗರು ಆಗ್ರಹಿಸಿದ್ದರು.
ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಲ್ಲಿ ಸಚಿವರು ಸಭೆ ನಡೆಸಲಿದ್ದಾರೆ.
ಇತ್ತೀಚಿಗೆ ಕಾಡಾನೆ ದಾಳಿಗೆ ಮಹಿಳೆ ಬಲಿ ವೇಳೆ ಕಡಬಗೆರೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ಲಾಠಿ ಚಾರ್ಜ್ ನಡೆಸಿ ರೈತರ ತೀವ್ರ ಆಕ್ರೋಶಕ್ಕೆ ಜಿಲ್ಲಾಡಳಿತ ಗುರಿಯಾಗಿತ್ತು.
ಶವವನ್ನ ರಸ್ತೆಯಲ್ಲಿಟ್ಟು ಈಶ್ವರ ಖಂಡ್ರೆ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು.












