6:20 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು

06/10/2021, 19:20

ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ.

ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿತ್ತು. ಈ ಕುರಿತು ಸಾಧಿಕ್ ಎಂಬವವರು ದೂರು ನೀಡಿದ್ದರು.
ಚಿಕ್ಕಮಗಳೂರಿನ ಕೊಪ್ಪದಿಂದ ತಮ್ಮನಾದ ಸುಲೈಮಾನ್ ಎಂಬವರು ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಸೆ.30 ರಂದು ಬೆಳಿಗ್ಗೆ 9. 00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ಇನ್ನೊಬ್ಬ ತಮ್ಮನಾದ ಶಂಶುದ್ದೀನ್ ಎಂಬಾತ ಸುಲೈ ಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ.

ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂದಿತ್ತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ ಸುಲೈ ಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಕೊಡಬೇಕು.

ಆತನನ್ನು ಸೆ.1 ರಂದು ಮಲ್ಪೆಯಿಂದ ನಾವು ಅಪಹರಣ ಮಾಡಿದ್ದೇವೆ ಎಂದು ತಿಳಿಸಿದ್ದನು.ನಂತರ ಸುಲೈಮಾನ್ ಸಂಬಂಧಿಕರು ಮಲ್ಪೆಗೆ ಬಂದು ಆತನ ಬಗ್ಗೆ ವಿಚಾರಿಸಿದ್ದರು. ಸುಲೈಮಾನ್ ಮೀನು ಲಾರಿಯ ಚಾಲಕ ಕೆಲಸದ ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ವಿಷಯ ತಿಳಿದು ಬಂದಿತ್ತು.

ನಂತರ  ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ  15 ಲಕ್ಷ ಹಣ ಕೊಡಬೇಕು.  ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು  ಅಪಹರಿಸಿದ್ದಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ, ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದನು. ಈ ಕುರಿತು ಸಾದಿಕ್ ಮಲ್ಪೆ ಠಾಣೆಗೆ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು