6:48 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು

06/10/2021, 19:20

ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ.

ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿತ್ತು. ಈ ಕುರಿತು ಸಾಧಿಕ್ ಎಂಬವವರು ದೂರು ನೀಡಿದ್ದರು.
ಚಿಕ್ಕಮಗಳೂರಿನ ಕೊಪ್ಪದಿಂದ ತಮ್ಮನಾದ ಸುಲೈಮಾನ್ ಎಂಬವರು ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಸೆ.30 ರಂದು ಬೆಳಿಗ್ಗೆ 9. 00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ಇನ್ನೊಬ್ಬ ತಮ್ಮನಾದ ಶಂಶುದ್ದೀನ್ ಎಂಬಾತ ಸುಲೈ ಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ.

ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂದಿತ್ತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ ಸುಲೈ ಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಕೊಡಬೇಕು.

ಆತನನ್ನು ಸೆ.1 ರಂದು ಮಲ್ಪೆಯಿಂದ ನಾವು ಅಪಹರಣ ಮಾಡಿದ್ದೇವೆ ಎಂದು ತಿಳಿಸಿದ್ದನು.ನಂತರ ಸುಲೈಮಾನ್ ಸಂಬಂಧಿಕರು ಮಲ್ಪೆಗೆ ಬಂದು ಆತನ ಬಗ್ಗೆ ವಿಚಾರಿಸಿದ್ದರು. ಸುಲೈಮಾನ್ ಮೀನು ಲಾರಿಯ ಚಾಲಕ ಕೆಲಸದ ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ವಿಷಯ ತಿಳಿದು ಬಂದಿತ್ತು.

ನಂತರ  ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ  15 ಲಕ್ಷ ಹಣ ಕೊಡಬೇಕು.  ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು  ಅಪಹರಿಸಿದ್ದಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ, ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದನು. ಈ ಕುರಿತು ಸಾದಿಕ್ ಮಲ್ಪೆ ಠಾಣೆಗೆ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು