8:59 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು

06/10/2021, 19:20

ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ.

ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿತ್ತು. ಈ ಕುರಿತು ಸಾಧಿಕ್ ಎಂಬವವರು ದೂರು ನೀಡಿದ್ದರು.
ಚಿಕ್ಕಮಗಳೂರಿನ ಕೊಪ್ಪದಿಂದ ತಮ್ಮನಾದ ಸುಲೈಮಾನ್ ಎಂಬವರು ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಸೆ.30 ರಂದು ಬೆಳಿಗ್ಗೆ 9. 00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ಇನ್ನೊಬ್ಬ ತಮ್ಮನಾದ ಶಂಶುದ್ದೀನ್ ಎಂಬಾತ ಸುಲೈ ಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ.

ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂದಿತ್ತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ ಸುಲೈ ಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಕೊಡಬೇಕು.

ಆತನನ್ನು ಸೆ.1 ರಂದು ಮಲ್ಪೆಯಿಂದ ನಾವು ಅಪಹರಣ ಮಾಡಿದ್ದೇವೆ ಎಂದು ತಿಳಿಸಿದ್ದನು.ನಂತರ ಸುಲೈಮಾನ್ ಸಂಬಂಧಿಕರು ಮಲ್ಪೆಗೆ ಬಂದು ಆತನ ಬಗ್ಗೆ ವಿಚಾರಿಸಿದ್ದರು. ಸುಲೈಮಾನ್ ಮೀನು ಲಾರಿಯ ಚಾಲಕ ಕೆಲಸದ ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ವಿಷಯ ತಿಳಿದು ಬಂದಿತ್ತು.

ನಂತರ  ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ  15 ಲಕ್ಷ ಹಣ ಕೊಡಬೇಕು.  ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು  ಅಪಹರಿಸಿದ್ದಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ, ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದನು. ಈ ಕುರಿತು ಸಾದಿಕ್ ಮಲ್ಪೆ ಠಾಣೆಗೆ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು