6:12 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ

12/11/2023, 18:38

ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ
ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ.

ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ. ಇನ್ನೋರ್ವ ವೃದ್ಧ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ. ಕೆ ಅರುಣ್, ಡಿವೈಎಸ್ಪಿ ದಿನಕರ್ ಹಾಗೂ ಮಲ್ಪೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಎಸ್ಪಿ ಡಾ. ಅರುಣ್ ಕೆ ನೇಜಾರಿನ ಸಮೀಪಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ ಮಾಡಲಾಗಿದೆ. ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಹಸೀನಾ ಮತ್ತವರ ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ. ನಾವು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು ತನಿಖೆ ಮಾಡಿ ಶೀಘ್ರ ಇದರ ಹಿಂದಿನ ಕಾರಣ ಪತ್ತೆ ಹಚ್ಚುತ್ತೇವೆ . ಸದ್ಯ ಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಿಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತಕ್ಷಣ ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು