3:50 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ

12/11/2023, 18:38

ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ
ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ.

ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ. ಇನ್ನೋರ್ವ ವೃದ್ಧ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ. ಕೆ ಅರುಣ್, ಡಿವೈಎಸ್ಪಿ ದಿನಕರ್ ಹಾಗೂ ಮಲ್ಪೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಎಸ್ಪಿ ಡಾ. ಅರುಣ್ ಕೆ ನೇಜಾರಿನ ಸಮೀಪಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ ಮಾಡಲಾಗಿದೆ. ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಹಸೀನಾ ಮತ್ತವರ ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ. ನಾವು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು ತನಿಖೆ ಮಾಡಿ ಶೀಘ್ರ ಇದರ ಹಿಂದಿನ ಕಾರಣ ಪತ್ತೆ ಹಚ್ಚುತ್ತೇವೆ . ಸದ್ಯ ಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಿಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತಕ್ಷಣ ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು