11:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ಮುಳುಗಿ ತುಮಕೂರಿನ ಯುವಕ ಮೃತ್ಯು; ಇನ್ನಿಬ್ಬರ ರಕ್ಷಣೆ

06/10/2021, 23:24

ಉಡುಪಿ(reporterkarnataka.com): ಮಲ್ಪೆ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾದ ನಡೆದಿದೆ.

ತುಮಕೂರಿನ ಅತ್ತರ್(23) ಎಂಬಾತ ಮೃತಪಟ್ಟ ಯುವಕ. ಬುಧವಾರ ಮಧ್ಯಾಹ್ನ 12. 00 ಗಂಟೆಗೆ ಮಲ್ಪೆ ಬೀಚ್ ಗೆ ಬಂದು ಮಧ್ಯಾಹ್ನ 2.00 ಗಂಟೆಗೆ ಸಲೀಂ, ಸಲ್ಮಾನ್, ಇಲಿಯಾಸ್, ಅರ್ಬಾಸ್, ಅತ್ತರ್, ಸುಹೇಲ್ ಅವರು  ನೀರಿನಲ್ಲಿ  ಆಟವಾಡಲು  ಸಮುದ್ರಕ್ಕೆ ಇಳಿದಿದ್ದಾರೆ. ಸಮುದ್ರದ ಅಲೆಗಳ ಅಬ್ಬರಕ್ಕೆ ಸಲ್ಮಾನ್, ಅರ್ಬಾಸ್, ಅತ್ತರ್ ನೀರಿನಲ್ಲಿ ಮುಳುಗಿದ್ದು, ಆ ಪೈಕಿ ಸಲ್ಮಾನ್ ಮತ್ತು ಅರ್ಬಾಸ್ ನನ್ನು ಮಲ್ಪೆ ಬೀಚ್ ನ ಟೂರಿಸ್ಟ್ ಬೋಟ್ ನವರು ರಕ್ಷಣೆ ಮಾಡಿದ್ದಾರೆ.

ಆದರೆ  ಅತ್ತರ್ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಮಧ್ಯಾಹ್ನ 3:00 ಗಂಟೆಗೆ ಅತ್ತರ್ ಮೃತದೇಹ ದೊರಕಿದೆ. ಅತ್ತರ್ ಮಲ್ಪೆ ಬೀಚ್ ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ನೀರಿನ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು