10:45 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ

28/08/2021, 15:40

ಕೊಲ್ಕತ್ತಾ (Reporterkarnataka.com)

ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಭಿಷೇಕ್ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್(TMC)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ಸೆಪ್ಟೆಂಬರ್ 6 ರಂದು ಪ್ರಕರಣದ ತನಿಖಾ ಅಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿದ್ದು, ಅವರ ಪತ್ನಿ ರುಜಿರಾ ಅವರಿಗೂ ಇದೇ ರೀತಿಯ ಸಮನ್ಸ್ ಕಳುಹಿಸಲಾಗಿದೆ.

ಮುಂದಿನ ತಿಂಗಳು ಬೇರೆ ಬೇರೆ ದಿನಾಂಕಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಕರಣಕ್ಕೆ ಸಂಬಂಧಪಟ್ಟ ಕೆಲವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020ರ ನವೆಂಬರ್‌ನಲ್ಲಿ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಎಫ್‌ಐಆರ್ ದಾಖಲಿಸಿತ್ತು. ನಂತರ ಪಿಎಂಎಲ್ಎ ಕಾಯ್ದೆ ಅಡಿ ಟಿಎಂಸಿ ನಾಯಕನ ವಿರುದ್ಧ ಇಡಿ ಕೇಸ್ ದಾಖಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು