11:55 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ, ಬಂದೂಕು ವಶ; ಇನ್ನೂ 3 ಮಂದಿಗೆ ಶೋಧ

30/06/2025, 11:57

•ಅರಣ್ಯ ಸಿಬ್ಬಂದಿ ಕಾರ್ಯಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಬೆಂಗಳೂರು(reporterkarnataka.com): ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಆರೋಪಿಯಿಂದ 10 ಜಿಂಕೆ,1 ಕಾಡು ಹಂದಿ ಮಾಂಸ ಹಾಗೂ ಬಂದೂಕು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ
ಇನ್ನೂ 3 ಮಂದಿಗೆ ಶೋಧ ನಡೆಯುತ್ತಿದೆ.


ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ಪ್ರತಾಪ್ (31) ಎಂಬಾತನನ್ನು ಬಂಧಿಸಿ, ಆತನಿಂದ 2 ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ ಮಾಡಿದ್ದಾರೆ.
ವನ್ಯಜೀವಿ ಹಂತಕರ ತಂಡವೊಂದು ಕೋಲಾರ, ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಕೊಂದು ಮಾಂಸ ಮಾರಾಟ ಮಾಡುತ್ತಿದೆ ಎಂದು ಸಚಿವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದರು.
ಸಚಿವರ ಸೂಚನೆಯಂತೆ ಕಾರ್ಯಾಚರಣೆ ನಡಸಿದ ಬೆಂಗಳೂರು ನಗರ ಅರಣ್ಯ ವಿಭಾಗದ ಸಿಬ್ಬಂದಿ ಮತ್ತು ಜಾಗೃತದಳದ ಜಂಟಿ ತಂಡ ಬನ್ನೇರುಘಟ್ಟ-ನೈಸ್ ರಸ್ತೆ ಜಂಕ್ಷನ್ ಬಳಿ ಕೆ.ಎ 05 / ಎಜಿ 1302 ಸಂಖ್ಯೆಯ ಕಾರನ್ನು ತಡೆದು ತಪಾಸಣೆ ನಡೆಸಿದಾಗ, ಕಾರಿನಲ್ಲಿ 4 ಸತ್ತ ಚುಕ್ಕೆ ಜಿಂಕೆ ಮತ್ತು ಒಂದು ಮೃತ ಕಾಡು ಹಂದಿ ದೇಹ ಸಾಗಿಸಲಾಗುತ್ತಿದ್ದನ್ನು ಪತ್ತೆ ಮಾಡಿ, ಪ್ರತಾಪ್ ಎಂಬಾತನನ್ನು ಬಂಧಿಸಿದರು.
ವಿಚಾರಣೆ ವೇಳೆ ಸಿ.ಕೆ.ಪಾಳ್ಯದ ಶೆಡ್ ನಲ್ಲಿ ಮತ್ತಷ್ಟು ಜಿಂಕೆಗಳ ಮೃತ ದೇಹ ಮತ್ತು ಮಾಂಸ ಇರುವ ವಿಷಯ ತಿಳಿದು, ಅಲ್ಲಿ ದಾಳಿ ಮಾಡಿ, ಬೈಕ್ ಮತ್ತು ಮತ್ತೊಂದು ಇಂಡಿಕಾ ಕಾರನ್ನೂ ವಶಪಡಿಕೊಂಡು ಒಟ್ಟು 10 ಜಿಂಕೆ ಹಾಗೂ ಒಂದು ಕಾಡು ಹಂದಿಯ ಸುಮಾರು 74 ಕೆಜಿ ಜಿಂಕೆ ಮಾಂಸ, 1 ಡಬಲ್ ಬ್ಯಾರೆಲ್ ಗನ್, 1 ಸಿಂಗಲ್ ಬ್ಯಾರೆಲ್ ಗನ್ ಮತ್ತು 10 ಕಾರ್ಟ್ರಿಡ್ಜ್ ಗಳನ್ನು ವಶಕ್ಕೆ ಪಡೆದರು.
ಜಿಂಕೆ ಮಾಂಸ ಇಟ್ಟಿದ್ದ ಶೆಡ್ ಮಾಲಿಕ ಭೀಮಪ್ಪ ಆರೋಪಿಗಳಾದ ಬಾಲರಾಜು ಹಾಗೂ ರಮೇಶ್ ಎಂಬುವವರು ನಾಪತ್ತೆಯಾಗಿದ್ದು, ಇವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ.
ಕಾರ್ಯಾಚರಣೆಯ ನೇತೃತ್ವವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್ ವಹಿಸಿದ್ದರು.
ಸಚಿವರ ಅಭಿನಂದನೆ: ಮಾಹಿತಿ ದೊರೆತ ಕೂಡಲೇ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿ ಜಿಂಕೆ ಹಂತಕರ ಜಾಲ ಭೇದಿಸಿರುವ ಬೆಂಗಳೂರು ನಗರ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು