ಇತ್ತೀಚಿನ ಸುದ್ದಿ
ಪುತ್ತೂರು ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ಭೂಪ!!: ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು
29/09/2025, 10:08

ಪುತ್ತೂರು(repprterkarnataka.com): ಇಲ್ಲಿನ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.
ಪುತ್ತೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಏಕಾಏಕಿ ಬಸ್ ನಿಲ್ದಾಣದಲ್ಲಿ ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.
ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.