5:36 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು ಸಮೀಪದ ಮನೆಗೆ ವಾಪಸ್!!

09/06/2025, 14:44

ಸಂತೋಷ್ ಅತ್ತಿಗೆರೆ
ಚಿಕ್ಕಮಗಳೂರು
info.reporterkarnataka@gmail.com

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದ ವೇಳೆ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ದರೊಬ್ಬರು 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ.
ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಎಂಬವರು ಕುಂಭಮೇಳದ ವೇಳೆ ನಾಪತ್ತೆಯಾಗಿ, ಇದೀಗ ಪತ್ತೆಯಾದವರು.
ಜನವರಿ 28ರಂದು ನರಸಿಂಹಮೂರ್ತಿ ಅವರು
ಪ್ರಯಾಗ್ ರಾಜ್ ನಲ್ಲಿ ನಾಪತ್ತೆಯಾಗಿದ್ದರು. ಅವರು
ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕರಾಗಿದ್ದರು. ಪುತ್ರ ಬದರೀನಾಥ್ ಜೊತೆ ಕುಟುಂಬ ಸಮೇತ ಕುಂಭ ಮೇಳಕ್ಕೆ ಹೋಗಿದ್ದರು‌. ಅಲ್ಲಿ ನಾಪತ್ತೆಯಾಗಿದ್ದರು. 3-4 ದಿನ ಹುಡುಕಿದ ಪುತ್ರ ಬದರೀನಾಥ್ ಕುಟುಂಬದೊಂದಿಗೆ ಊರಿಗೆ ವಾಪಸ್ಸಾಗಿದ್ದರು. ಕುಟುಂಬವನ್ನು ಊರಲ್ಲಿ ಬಿಟ್ಟು ಮತ್ತೆ ಹೋಗಿ ಹುಡುಕಿದ್ದರೂ ಸಿಕ್ಕಿರಲಿಲ್ಲ.
6 ತಿಂಗಳ ಬಳಿಕ ನಾಪತ್ತೆಯಾಗಿದ್ದ ನರಸಿಂಹಮೂರ್ತಿ ಮನೆಗೆ ವಾಪಸ್ ಬಂದಿದ್ದಾರೆ. ನರಸಿಂಹ ಮೂರ್ತಿಯವರು
ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್ ಸಂಸ್ಥೆಯ ಆಶ್ರಯದಲ್ಲಿದ್ದರು. ಶಾರದಾ ಸಂಸ್ಥೆಯವರೇ ಕರೆತಂದು ನರಸಿಂಹಮೂರ್ತಿಯನ್ನ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು