5:02 AM Saturday18 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು ಸಮೀಪದ ಮನೆಗೆ ವಾಪಸ್!!

09/06/2025, 14:44

ಸಂತೋಷ್ ಅತ್ತಿಗೆರೆ
ಚಿಕ್ಕಮಗಳೂರು
info.reporterkarnataka@gmail.com

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದ ವೇಳೆ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ದರೊಬ್ಬರು 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ.
ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಎಂಬವರು ಕುಂಭಮೇಳದ ವೇಳೆ ನಾಪತ್ತೆಯಾಗಿ, ಇದೀಗ ಪತ್ತೆಯಾದವರು.
ಜನವರಿ 28ರಂದು ನರಸಿಂಹಮೂರ್ತಿ ಅವರು
ಪ್ರಯಾಗ್ ರಾಜ್ ನಲ್ಲಿ ನಾಪತ್ತೆಯಾಗಿದ್ದರು. ಅವರು
ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕರಾಗಿದ್ದರು. ಪುತ್ರ ಬದರೀನಾಥ್ ಜೊತೆ ಕುಟುಂಬ ಸಮೇತ ಕುಂಭ ಮೇಳಕ್ಕೆ ಹೋಗಿದ್ದರು‌. ಅಲ್ಲಿ ನಾಪತ್ತೆಯಾಗಿದ್ದರು. 3-4 ದಿನ ಹುಡುಕಿದ ಪುತ್ರ ಬದರೀನಾಥ್ ಕುಟುಂಬದೊಂದಿಗೆ ಊರಿಗೆ ವಾಪಸ್ಸಾಗಿದ್ದರು. ಕುಟುಂಬವನ್ನು ಊರಲ್ಲಿ ಬಿಟ್ಟು ಮತ್ತೆ ಹೋಗಿ ಹುಡುಕಿದ್ದರೂ ಸಿಕ್ಕಿರಲಿಲ್ಲ.
6 ತಿಂಗಳ ಬಳಿಕ ನಾಪತ್ತೆಯಾಗಿದ್ದ ನರಸಿಂಹಮೂರ್ತಿ ಮನೆಗೆ ವಾಪಸ್ ಬಂದಿದ್ದಾರೆ. ನರಸಿಂಹ ಮೂರ್ತಿಯವರು
ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್ ಸಂಸ್ಥೆಯ ಆಶ್ರಯದಲ್ಲಿದ್ದರು. ಶಾರದಾ ಸಂಸ್ಥೆಯವರೇ ಕರೆತಂದು ನರಸಿಂಹಮೂರ್ತಿಯನ್ನ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು