10:34 PM Monday23 - March 2026
ಬ್ರೇಕಿಂಗ್ ನ್ಯೂಸ್
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು…

ಇತ್ತೀಚಿನ ಸುದ್ದಿ

ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!!

12/06/2025, 21:53

ಅಹಮದಾಬಾದ್(reporterkarnataka.com):
ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ
ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ.
ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇಶ್ ಬಿಸ್ವಾಸ್ ಎಂಬವರೇ ಸಾವಿನಿಂದ ಗೆದ್ದು ಬಂದ ಮೃತ್ಯುಂಜಯ. ರಮೇಶ್ ಬಿಸ್ವಾಸ್ ಅವರು ವಿಮಾನಕ್ಕೆ ಬೆಂಕಿ ಹತ್ತಿಕೊಳ್ಳುವುದರೊಳಗೆ ವಿಮಾನದಿಂದ ಹೊರಗೆ ಜಿಗಿದಿದ್ದಾರೆ. ಸಣ್ಣಪುಟ್ಟ ಗಾಯಗಳನ್ನು ಬಿಟ್ಟರೆ ಬಿಸ್ವಾಸ್ ಅವರಿಗೆ ಬೇರೆ ಏನೂ ತೊಂದರೆಯಾಗಿಲ್ಲ. ಅವರು ನಡೆದುಕೊಂಡೇ ದುರಂತ ಸ್ಥಳದಿಂದ ಹೊರಗೆ ಬಂದಿದ್ದಾರೆ. ಟೇಕ್ ಆಫ್ ಆದ 30 ಸೆಕೆಂಡ್‌ಗಳಲ್ಲಿ ವಿಮಾನ ಪತನಗೊಂಡಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗೇಟ್‌ವಿಕ್ ವಿಮಾನ ನಿಲ್ದಾಣಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

ಭಾರತದ 169 ಮಂದಿ ಸೇರಿದಂತೆ 53 ಬ್ರಿಟನ್ ಪ್ರಜೆಗಳು ಹಾಗೂ ಇತರರು ಸೇರಿ ಒಟ್ಟು 243 ಮಂದಿ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಇವರಲ್ಲಿ ಭಾರತೀಯ ಮೂಲದ ಬ್ರಿಟನ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶರಾಗಿ ಬದುಕುಳಿದಿದ್ದಾರೆ.

ವಿಮಾನದ ತುರ್ತು ನಿರ್ಗಮನ ದ್ವಾರದ ಬಳಿಯ 11ಏ ಸೀಟ್‌ನಲ್ಲಿ ಆಸೀನರಾಗಿದ್ದ, ರಮೇಶ್ ಅವರು ವಿಮಾನ ಪತನಗೊಳ್ಳುತ್ತಿದ್ದ ಸಂದರ್ಭದಲ್ಲಿ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು