11:35 PM Friday13 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!!

12/06/2025, 21:53

ಅಹಮದಾಬಾದ್(reporterkarnataka.com):
ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ
ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ.
ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇಶ್ ಬಿಸ್ವಾಸ್ ಎಂಬವರೇ ಸಾವಿನಿಂದ ಗೆದ್ದು ಬಂದ ಮೃತ್ಯುಂಜಯ. ರಮೇಶ್ ಬಿಸ್ವಾಸ್ ಅವರು ವಿಮಾನಕ್ಕೆ ಬೆಂಕಿ ಹತ್ತಿಕೊಳ್ಳುವುದರೊಳಗೆ ವಿಮಾನದಿಂದ ಹೊರಗೆ ಜಿಗಿದಿದ್ದಾರೆ. ಸಣ್ಣಪುಟ್ಟ ಗಾಯಗಳನ್ನು ಬಿಟ್ಟರೆ ಬಿಸ್ವಾಸ್ ಅವರಿಗೆ ಬೇರೆ ಏನೂ ತೊಂದರೆಯಾಗಿಲ್ಲ. ಅವರು ನಡೆದುಕೊಂಡೇ ದುರಂತ ಸ್ಥಳದಿಂದ ಹೊರಗೆ ಬಂದಿದ್ದಾರೆ. ಟೇಕ್ ಆಫ್ ಆದ 30 ಸೆಕೆಂಡ್‌ಗಳಲ್ಲಿ ವಿಮಾನ ಪತನಗೊಂಡಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗೇಟ್‌ವಿಕ್ ವಿಮಾನ ನಿಲ್ದಾಣಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

ಭಾರತದ 169 ಮಂದಿ ಸೇರಿದಂತೆ 53 ಬ್ರಿಟನ್ ಪ್ರಜೆಗಳು ಹಾಗೂ ಇತರರು ಸೇರಿ ಒಟ್ಟು 243 ಮಂದಿ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಇವರಲ್ಲಿ ಭಾರತೀಯ ಮೂಲದ ಬ್ರಿಟನ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶರಾಗಿ ಬದುಕುಳಿದಿದ್ದಾರೆ.

ವಿಮಾನದ ತುರ್ತು ನಿರ್ಗಮನ ದ್ವಾರದ ಬಳಿಯ 11ಏ ಸೀಟ್‌ನಲ್ಲಿ ಆಸೀನರಾಗಿದ್ದ, ರಮೇಶ್ ಅವರು ವಿಮಾನ ಪತನಗೊಳ್ಳುತ್ತಿದ್ದ ಸಂದರ್ಭದಲ್ಲಿ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು