1:46 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!!

12/06/2025, 21:53

ಅಹಮದಾಬಾದ್(reporterkarnataka.com):
ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ
ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ.
ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇಶ್ ಬಿಸ್ವಾಸ್ ಎಂಬವರೇ ಸಾವಿನಿಂದ ಗೆದ್ದು ಬಂದ ಮೃತ್ಯುಂಜಯ. ರಮೇಶ್ ಬಿಸ್ವಾಸ್ ಅವರು ವಿಮಾನಕ್ಕೆ ಬೆಂಕಿ ಹತ್ತಿಕೊಳ್ಳುವುದರೊಳಗೆ ವಿಮಾನದಿಂದ ಹೊರಗೆ ಜಿಗಿದಿದ್ದಾರೆ. ಸಣ್ಣಪುಟ್ಟ ಗಾಯಗಳನ್ನು ಬಿಟ್ಟರೆ ಬಿಸ್ವಾಸ್ ಅವರಿಗೆ ಬೇರೆ ಏನೂ ತೊಂದರೆಯಾಗಿಲ್ಲ. ಅವರು ನಡೆದುಕೊಂಡೇ ದುರಂತ ಸ್ಥಳದಿಂದ ಹೊರಗೆ ಬಂದಿದ್ದಾರೆ. ಟೇಕ್ ಆಫ್ ಆದ 30 ಸೆಕೆಂಡ್‌ಗಳಲ್ಲಿ ವಿಮಾನ ಪತನಗೊಂಡಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗೇಟ್‌ವಿಕ್ ವಿಮಾನ ನಿಲ್ದಾಣಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.

ಭಾರತದ 169 ಮಂದಿ ಸೇರಿದಂತೆ 53 ಬ್ರಿಟನ್ ಪ್ರಜೆಗಳು ಹಾಗೂ ಇತರರು ಸೇರಿ ಒಟ್ಟು 243 ಮಂದಿ ವಿಮಾನದಲ್ಲಿದ್ದರು ಎನ್ನಲಾಗಿದ್ದು, ಇವರಲ್ಲಿ ಭಾರತೀಯ ಮೂಲದ ಬ್ರಿಟನ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶರಾಗಿ ಬದುಕುಳಿದಿದ್ದಾರೆ.

ವಿಮಾನದ ತುರ್ತು ನಿರ್ಗಮನ ದ್ವಾರದ ಬಳಿಯ 11ಏ ಸೀಟ್‌ನಲ್ಲಿ ಆಸೀನರಾಗಿದ್ದ, ರಮೇಶ್ ಅವರು ವಿಮಾನ ಪತನಗೊಳ್ಳುತ್ತಿದ್ದ ಸಂದರ್ಭದಲ್ಲಿ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು