1:02 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ

21/12/2022, 20:12

ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25 ನೇ ಆದಿತ್ಯವಾರದಂದು ಮಂಗಳೂರಿನ ಕೆ.ಪಿ.ಟಿ. ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ.

ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನ್ವಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ , ರಾಜ್ಯ ಮಟ್ಟದ ಕರಾಟೆ ಪಟು ಅನಘ ಭಂಡಾರಿ ಪ್ರತಿಜ್ಞಾ ಸ್ವೀಕರಿಸಿ , ಸಂಘದ ಅಧ್ಯಕ್ಷೆ ಬಬಿತಾ ಲತೀಶ್ ಅಧ್ಯಕ್ಷತೆ ವಹಿಸಿಲಿದ್ದಾರೆ , ಭಂಡಾರಿ ಯುವ ವೇದಿಕೆಯ ಮಾಜಿ ಅಧ್ಯಕ್ಷ ಕೃಷ್ಣಾನಂದ ಭಂಡಾರಿ ಧ್ವಜಾರೋಹಣ ಮಾಡಿ , ಎ.ಜೆ.ಆಸ್ಪತ್ರೆ ಮಂಗಳೂರು ಐ.ಎಂ.ಎಸ್.ತುರ್ತು ಚಿಕಿತ್ಸಾ ವಿಭಾಗದ ಮೇಲ್ವಿಚಾರಕಿ ಲೀಲಾವತಿ ಭಾಸ್ಕರ್ ಭಂಡಾರಿ ಕೋಡಿಕಲ್ ಮುಖ್ಯ ಅತಿಥಿಯಾಗಿ ಅಗಮಿಸಲಿದ್ದಾರೆ. ಕ್ರಿಕೆಟ್, ತ್ರೋಬಾಲ್, ವಾಲಿಬಾಲ್ ,
ಹಗ್ಗಜಗ್ಗಾಟ,ಆಟೋಟ ಸ್ವರ್ಧೆಗಳು ಮಡಕೆ ಒಡೆಯುವುದು ಇನ್ನಿತರ ಸ್ವರ್ಧೆಗಳು ಹಾಗೂ ಭಂಡಾರಿ ಸಮಾಜದ ವಧು – ವರರ ನೊಂದಾವಣೆ ನಡೆಯಲಿದೆ.

ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭ ಬಹುಮಾನ ವಿತರಣೆಯ ಮುಖ್ಯ ಅತಿಥಿಗಳಾಗಿ ಭಂಡಾರಿ ಮಹಾಮಂಡಳದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ,ಬೆಂಗಳೂರು ಡಿಜಿಎಸ್ . ಜಿಐಎಮ್ಎಸ್.ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ॥ ರೋಹನ್ ಪಿ.ಜೆ.ಭಂಡಾರಿ , ಉಡುಪಿ ಪ್ರೊಬೆಷನರಿ ಸಬ್ಇನ್ಸ್ ಪೆಕ್ಟರ್ ನಿಧಿ ಬಿ.ಎನ್., ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗುರುದಾಸ್ ಭಂಡಾರಿ ಹಿರೇಬೆಟ್ಟು , ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ಉಜಿರೆ , ರಾಷ್ಟ್ರ ಮಟ್ಟದ ದೇಹದಾರ್ಡ್ಯ ಪಟು ಯಶಸ್ವಿನಿ ವಿ.ಭಂಡಾರಿ , ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ರಮಾನಾಥ ಭಂಡಾರಿ ಮತ್ತು ಮಂಗಳೂರು ಭಂಡಾರಿ ಯುವ ವೇದಿಕೆಯ ಅಧ್ಯಕ್ಷ ನಿತ್ಯಾನಂದ ಭಂಡಾರಿ ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು