5:54 PM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಕ್ಷೇತ್ರ: ವಾರ್ಷಿಕ ಪರಮ ಪವಿತ್ರ ಪ್ರಸಾದದ ಭವ್ಯ ಮೆರವಣಿಗೆ

05/01/2025, 22:43

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಭಾನುವಾರ ನಗರದ ಮಿಲಾಗ್ರಿಸ್ ಚರ್ಚ್ ನಿಂದ ರೊಸಾರಿಯೊ ಕೆಥೆಡ್ರಲ್ ಚರ್ಚ್ ವರೆಗೆ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಮೆರವಣಿಗೆಗೂ ಮುನ್ನ ಮಿಲಾಗ್ರಿಸ್ ಚರ್ಚ್ ನಲ್ಲಿ ಮಂಗಳೂರಿನ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಸಾಮೂಹಿಕವಾಗಿ ಬಲಿಪೂಜೆಯನ್ನು ಸಲ್ಲಿಸಿದರು. ಯೇಸುವಿನ ದೈವದರ್ಶನ ಮಹೋತ್ಸವದಂದು ಏರ್ಪಡಿಸಿದ ಈ ಮೆರವಣಿಗೆಯು ಯೇಸು ಕ್ರಿಸ್ತರು ತಮ್ಮನ್ನು ಹುಡುಕಿ ಬಂದ ಜ್ಯೋತಿಷ್ಯರಿಗೆ ತಮ್ಮ ಮೊದಲ ದೈವ ದರ್ಶನ ನೀಡಿದ ಘಟನೆಯನ್ನು ಸ್ಮರಿಸುತ್ತದೆ. ಈ ಹಬ್ಬವನ್ನು ‘ಎಪಿಫನಿ’, ‘ಥಿಯೋಫನಿ’ ಅಥವಾ ‘ತ್ರಿ ಕಿಂಗ್ಸ್ ಡೇ’ ಎಂದೂ ಕರೆಯುತ್ತಾರೆ.
ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಆವರು ತಮ್ಮ ಧರ್ಮೋಪದೇಶದಲ್ಲಿ “ಪ್ರಭು ಯೇಸು ಕ್ರಿಸ್ತರು ವಿಶ್ವದ ನಕ್ಷತ್ರ, ಅವರು ಶಾಶ್ವತ ಮೋಕ್ಷಕ್ಕೆ ನಮಗೆ ಮಾರ್ಗದರ್ಶನ ನೀಡಲು ಪ್ರಕಾಶಮಾನವಾಗಿ ಹೊಳೆಯುತ್ತಾರೆ. ಮೂರು ರಾಜರ ಹಬ್ಬವು ನಮ್ಮ ಭವಿಷ್ಯವನ್ನು ಜ್ಯೋತಿಷ್ಯ ಅಥವಾ ಜಾತಕದಿಂದ ನಿಯಂತ್ರಿಸುವುದಿಲ್ಲ ಆದರೆ ಧರ್ಮಗ್ರಂಥಗಳ ಮೂಲಕ ದೈವಿಕ ಬಹಿರಂಗಪಡಿಸುವಿಕೆಯಿಂದ ನಮಗೆ ನೆನಪಿಸುತ್ತದೆ.
ಬಿಷಪ್ ತನ್ನ ಧರ್ಮೋಪದೇಶದಲ್ಲಿ, ಮೂವರು ಜ್ಯೋತಿಷ್ಯರ ಪಯಣದ ಆಳವಾದ ಸಂಕೇತವನ್ನು ಎತ್ತಿ ತೋರಿಸಿ, ನಮ್ಮ ಆಧ್ಯಾತ್ಮಿಕ ಜೀವನಕ್ಕೆ ಅದರ ಪ್ರಸ್ತುತತೆಯನ್ನು ಒತ್ತಿಹೇಳಿದರು.
“ಸತ್ಯದ ಹುಡುಕಾಟದಲ್ಲಿ ಪ್ರಪಂಚದ ನಿಜವಾದ ಬೆಳಕು ಯೇಸುವನ್ನು ನೋಡಲು ಬಂದ ಜ್ಯೋತಿಷ್ಯರ ಪಯಣ, ನಮ್ಮ ಭರವಸೆಯ ಪ್ರಯಾಣದ ಆರಂಭವನ್ನು ಸೂಚಿಸುತ್ತದೆೆ,” ಎಂದು ಅವರು ಹೇಳಿದರು.


ನಮ್ಮ ಭರವಸೆಯ ಪಯಣದಲ್ಲಿ ಕ್ರಿಸ್ತನ ಅನುಯಾಯಿಗಳಾಗಿ, ನಾವು ನಮ್ಮ ಜೀವನದಲ್ಲಿ ಆತನ ಬೆಳಕನ್ನು ಪ್ರತಿಬಿಂಬಿಸಲು ಮತ್ತು ಪ್ರಪಂಚದ ನಿಜವಾದ ಬೆಳಕಾಗಿರುವ ಯೇಸುವಿನೆಡೆ ಎಲ್ಲರನ್ನು ಕರೆತರಲು ಕರೆಯಲ್ಪಟ್ಟಿದ್ದೇವೆ”, ಎಂದು ಬೋಧಿಸಿದರು.
ಪೂಜಾಂತ್ಯಕ್ಕೆ ಆರಂಭಗೊಂಡ ಮೆರವಣಿಗೆಯ ಜೊತೆ, ಪವಿತ್ರ ಪ್ರಸಾದವನ್ನು ಹೊತ್ತೊಯ್ದ ಅಲಂಕೃತ ವಾಹನವು ಮಿಲಾಗ್ರಿಸ್ ಚರ್ಚ್ ನಿಂದ ಪ್ರಾರಂಭವಾಗಿ ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಹಂಪನಕಟ್ಟೆ, ಕ್ಲಾಕ್ ಟವರ್ ಸರ್ಕಲ್, ಎ.ಬಿ. ಶೆಟ್ಟಿ ಸರ್ಕಲ್ ಮತ್ತು ನೆಹರು ವೃತ್ತದ ಮೂಲಕ ಸಾಗಿತು.
ಮೆರವಣಿಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತಾದಿಗಳು ನಗರದ ರಸ್ತೆಗಳಲ್ಲಿ ದೇವರನ್ನು ಮಹಿಮೆಪಡಿಸುತ್ತಾ, ಆರಾಧಿಸುತ್ತಾ, ಬ್ಯಾಂಡ್-ಸಂಗೀತ ಮತ್ತು ಭಕ್ತಿ ಗೀತೆಗಳೊಂದಿಗೆ, ಜನಸಾಮನ್ಯರಿಗೆ ಅಡಚಣೆಯನ್ನುಂಟು ಮಾಡದೆ ಎರಡು ಸಾಲುಗಳಲ್ಲಿ ಸಾಗಿತು.
ಬಿಷಪ್ ನೇತೃತ್ವದ ಮೆರವಣಿಗೆಯು ರೊಸಾರಿಯೊ ಕೆಥೆಡ್ರಲ್ ಚರ್ಚ್ ಆವರಣದಲ್ಲಿ ಆರಾಧನೆಯೊಂದಿಗೆ ಸಮಾಪನಗೊಂಡಿತು.
ರೊಸಾರಿಯೋ ಕೆಥೆಡ್ರಲ್ ಚರ್ಚ್ ಮೈದಾನದಲ್ಲಿ ಪಾನಿರ್ ಚರ್ಚ್‌ ಧರ್ಮಗುರುಗಳಾದ ವಂದನೀಯ ವಿಕ್ಟರ್ ಡಿ’ಮೆಲ್ಲೋ ಅವರು 2024 ರ ಜುಬಿಲಿ ವರ್ಷದ ವಿಷಯ: “ಭರವಸೆ ನಮ್ಮನ್ನು ನಿರಾಶೆಗೊಳಿಸುವುದಿಲ್ಲ” ಎಂಬುದಾಗಿ ಬೋಧಿಸಿದರು. ಪರಮ ಪ್ರಸಾದದ ಸಂಸ್ಕಾರದ ಮತ್ತು ಪವಿತ್ರ ಗ್ರಂಥಗಳ ಸಮರ್ಥನೀಯ ಶಕ್ತಿಯನ್ನು ಒತ್ತಿಹೇಳುತ್ತಾ, “ಜೀವನದ ಕಷ್ಟಗಳು, ವೈಫಲ್ಯಗಳು ಮತ್ತು ಅನಾರೋಗ್ಯದ ನಡುವೆ, ಪರಮ ಪ್ರಸಾದದ ಸಂಸ್ಕಾರ ಮತ್ತು ದೇವರ ವಾಕ್ಯದಲ್ಲಿ ಭರವಸೆಯ ಮೂಲಗಳನ್ನು ಹುಡುಕಲು ನಾವು ಕರೆಯಲ್ಪಟ್ಟಿದ್ದೇವೆ. ನಾವು ಭರವಸೆಯ ಯಾತ್ರಿಕರಾಗೋಣ. ಭರವಸೆಯನ್ನು ಎಲ್ಲೆಡೆ ಬಿತ್ತರಿಸೋಣ, ಹತಾಶೆಯಲ್ಲಿರುವವರನ್ನು ಮೇಲಕ್ಕೆತ್ತೋಣ” ಎಂದು ಬೋಧಿಸಿದರು.
ರೊಸಾರಿಯೊದಲ್ಲಿ ನಡೆದ ಆರಾಧನೆ ವಿಧಿಯನ್ನು ಮಂಗಳಜ್ಯೋತಿ ಕೇಂದ್ರದ ವಂದನೀಯ ವಿಜಯ್ ಮಚಾದೊ ಕ್ಯಾಥೊಲಿಕ್ ವಿದ್ಯಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ವಂದನೀಯ ಪ್ರವೀಣ್ ಲಿಯೊ ಲಸ್ರಾದೊರವರು ಭಕ್ತಿಯುತವಾಗಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು