2:01 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಶಾಸಕರು ಕ್ಷೇತ್ರ ಅಭಿವೃದ್ಧಿಗೆ ಏನು ಮಾಡಿದ್ದಾರೆ?, ಡಾ. ಭರತ್ ಶೆಟ್ಟಿ ಚರ್ಚೆಗೆ ಬರಲಿ: ಮಾಜಿ ಮೇಯರ್ ಕವಿತಾ ಸನಿಲ್ ಸವಾಲು

04/05/2023, 18:53

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಯನ್ನೇ ಈ ಬಾರಿಯ ಚುನಾವಣೆಯಲ್ಲಿಯೂ ಮತ್ತೊಮ್ಮೆ ಪುನರುಚ್ಚರಿಸಿ ದ್ದಾರೆ. ಇದು ಹಳೆ ಮದ್ಯ ಹೊಸ ಬಾಟ್ಲಿಗೆ ಹಾಕಿದಂತೆ ಎಂದು ಮಾಜಿ ಮೇಯರ್ ಕವಿತಾ ಸನಿಲ್ ವ್ಯಾಖ್ಯಾನಿಸಿದ್ದಾರೆ.
ಸುರತ್ಕಲ್ ಸಮೀಪದ ಹೊಸಬೆಟ್ಟುವಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಗುರುವಾರ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.


ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯಲ್ಲಿರುವ ಭರವಸೆಗಳು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳಾಗಿವೆ. ಇದೊಂದು ದೊಡ್ಡ ಸುಳ್ಳಿನ ಕಂತೆ. ಈ ಕುರಿತು ತಾನು ಚರ್ಚೆಗೆ ಬರಲು ಸಿದ್ದ ಎಂದು ಶಾಸಕರಿಗೆ ಮಾಜಿ ಮೇಯರ್ ಸವಾಲು ಹಾಕಿದರು.
ರಸ್ತೆ, ತೋಡು ಕಾಮಗಾರಿ ನಡೆಸಲು ಶಾಸಕರು ಬೇಕಾಗಿಲ್ಲ. ಇಂತಹ ಸಣ್ಣ ಕೆಲಸಗಳನ್ನು ಮಾಡಲು ಕಾರ್ಪೋರೇಟರ್ ಗಳು ಸಾಕು. ಶಾಸಕರು ಉತ್ತರ ಕ್ಷೇತ್ರಗಳಿಗೆ ಬೇರೆ ಏನು ಸಾಧನೆ ಮಾಡಿದ್ದಾರೆ ಎಂಬ ಕುರಿತು ವಿವರ ನೀಡಲಿ. ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಬೃಹತ್ ಹಾಗೂ ಮಧ್ಯಮ ಗಾತ್ರದ ಕೈಗಾರಿಕೆಗಳಿವೆ. ಶಾಸಕರು ಇಲ್ಲಿನ ಎಷ್ಟು ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದಾರೆ ಎನ್ನುವುದರ ಕುರಿತು ಮಾಹಿತಿ ಒದಗಿಸಲಿ. ಹಿಂದುತ್ವದ ಹೆಸರಿನಲ್ಲಿ ಬಿಲ್ಲವ ಯುವಕರನ್ನು ಜೈಲಿಗೆ ತಳ್ಳಿದ್ದು ಬಿಟ್ಟರೆ ಇವರೇನು ಸಾಧನೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೇರಿ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಮಾಜಿ ಕಾರ್ಪೋರೇಟರ್ ದೀಪಕ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು