8:56 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಶಾಸಕರು ಕ್ಷೇತ್ರ ಅಭಿವೃದ್ಧಿಗೆ ಏನು ಮಾಡಿದ್ದಾರೆ?, ಡಾ. ಭರತ್ ಶೆಟ್ಟಿ ಚರ್ಚೆಗೆ ಬರಲಿ: ಮಾಜಿ ಮೇಯರ್ ಕವಿತಾ ಸನಿಲ್ ಸವಾಲು

04/05/2023, 18:53

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಯನ್ನೇ ಈ ಬಾರಿಯ ಚುನಾವಣೆಯಲ್ಲಿಯೂ ಮತ್ತೊಮ್ಮೆ ಪುನರುಚ್ಚರಿಸಿ ದ್ದಾರೆ. ಇದು ಹಳೆ ಮದ್ಯ ಹೊಸ ಬಾಟ್ಲಿಗೆ ಹಾಕಿದಂತೆ ಎಂದು ಮಾಜಿ ಮೇಯರ್ ಕವಿತಾ ಸನಿಲ್ ವ್ಯಾಖ್ಯಾನಿಸಿದ್ದಾರೆ.
ಸುರತ್ಕಲ್ ಸಮೀಪದ ಹೊಸಬೆಟ್ಟುವಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಗುರುವಾರ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.


ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯಲ್ಲಿರುವ ಭರವಸೆಗಳು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳಾಗಿವೆ. ಇದೊಂದು ದೊಡ್ಡ ಸುಳ್ಳಿನ ಕಂತೆ. ಈ ಕುರಿತು ತಾನು ಚರ್ಚೆಗೆ ಬರಲು ಸಿದ್ದ ಎಂದು ಶಾಸಕರಿಗೆ ಮಾಜಿ ಮೇಯರ್ ಸವಾಲು ಹಾಕಿದರು.
ರಸ್ತೆ, ತೋಡು ಕಾಮಗಾರಿ ನಡೆಸಲು ಶಾಸಕರು ಬೇಕಾಗಿಲ್ಲ. ಇಂತಹ ಸಣ್ಣ ಕೆಲಸಗಳನ್ನು ಮಾಡಲು ಕಾರ್ಪೋರೇಟರ್ ಗಳು ಸಾಕು. ಶಾಸಕರು ಉತ್ತರ ಕ್ಷೇತ್ರಗಳಿಗೆ ಬೇರೆ ಏನು ಸಾಧನೆ ಮಾಡಿದ್ದಾರೆ ಎಂಬ ಕುರಿತು ವಿವರ ನೀಡಲಿ. ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಬೃಹತ್ ಹಾಗೂ ಮಧ್ಯಮ ಗಾತ್ರದ ಕೈಗಾರಿಕೆಗಳಿವೆ. ಶಾಸಕರು ಇಲ್ಲಿನ ಎಷ್ಟು ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದಾರೆ ಎನ್ನುವುದರ ಕುರಿತು ಮಾಹಿತಿ ಒದಗಿಸಲಿ. ಹಿಂದುತ್ವದ ಹೆಸರಿನಲ್ಲಿ ಬಿಲ್ಲವ ಯುವಕರನ್ನು ಜೈಲಿಗೆ ತಳ್ಳಿದ್ದು ಬಿಟ್ಟರೆ ಇವರೇನು ಸಾಧನೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೇರಿ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಮಾಜಿ ಕಾರ್ಪೋರೇಟರ್ ದೀಪಕ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು