3:56 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಂಗಳೂರು: 200 ಯುವ ವಕೀಲರಿಗೆ  ಆದ್ಯತೆ ಮೇರೆಗೆ ಕೋವಿಡ್ ಲಸಿಕೆ 

02/06/2021, 06:34

ಮಂಗಳೂರು(reporterkarnataka news): ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸುಮಾರು 200 ಯುವ ವಕೀಲರಿಗೆ ಲಸಿಕೆ ನೀಡಿದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ, ಉಪಾಧ್ಯಕ್ಷರಾದ ಜಿನೇಂದ್ರ ಕುಮಾರ್, ಜೊತೆ ಕಾರ್ಯದರ್ಶಿ ಪ್ರಮೀಳಾ, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಮೋದ್ ಕೆರ್ವಾಶೆ, ರವಿರಾಜ ಶೆಟ್ಟಿ, ಪ್ರೇಮ್ ಅಂಚನ್, ಶುಕರಾಜ ಕೊಟ್ಟಾರಿ, ವಿನಯ ಕುಮಾರ್, ಚಂದ್ರಹಾಸ ಕೊಟ್ಟಾರಿ ಮೊದಲಾದವರು ಲಸಿಕೆ ಅಭಿಯಾನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಉಪಯುಕ್ತ ನೆರವು ನೀಡಿದರು.

ಜಿಲ್ಲಾ ನ್ಯಾಯಾಧೀಶರ ಸೂಚನೆ ಹಾಗೂ ಮನವಿ ಮೇರೆಗೆ ಜಿಲ್ಲಾಡಳಿತ ಈ ವಿಶೇಷ ಲಸಿಕಾ ಅಭಿಯಾನವನ್ನು ನಡೆಸಿತ್ತು. ಈ ಹಿಂದೆ, ನ್ಯಾಯಾಂಗ ಸಿಬ್ಬಂದಿಗೆ ಹಾಗೂ 45 ವರ್ಷ ಮೇಲ್ಪಟ್ಟ ವಕೀಲರಿಗೆ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿತ್ತು. 

ಎರಡೂ ಶಿಬಿರಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದವರಿಗೆ ಹಾಗೂ ವಕೀಲರ ಕುಟುಂಬ ಸದಸ್ಯರಿಗೂ ಮುಂದಿನ ದಿನಗಳಲ್ಲಿ ಲಸಿಕೆ ಅಭಿಯಾನ ನಡೆಸುವ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು