6:30 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಕ್ರೋಶ

20/01/2025, 18:38

*ಮಧ್ಯ ಎಸ್ ಟಿಪಿಯಲ್ಲಿ ಜನರೇಟರ್ ಇಲ್ಲ*

*ಮನೆಯಲ್ಲಿರುವ 13 ಸಿಬ್ಬಂದಿಗೆ ಸಂಬಳ*

ಮಂಗಳೂರು(reporterkarnataka.com): ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದರು.


ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ ಬಾವಿಗಿಳಿದರೂ ಪ್ರಯೋಜನವಾಗಿಲ್ಲ. ಸತ್ಯಶೋಧನಾ ಸಮಿತಿ ರಚಿಸುವುದಕ್ಕೂ ಪಾಲಿಕೆಯ ಆಡಳಿತ ಮುಂದಾಗಿಲ್ಲ. ಹೀಗಾಗಿ ನಾವೇ ಸಮಿತಿ ರಚಿಸಿ ತನಿಖೆ ಮಾಡಿದ್ದೇವೆ. ಎಲ್ಲಿ ಎಸ್ ಟಿಪಿ ಕೊಳಚೆ ನೀರು ಸೇರುತ್ತಿದೆಯೋ ಅಲ್ಲಿ ಹೋಗಿ ಪ್ರತ್ಯಕ್ಷ ವರದಿ ತಯಾರಿಸಿ ಅದನ್ನು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿಯ ಸಂದರ್ಭದಲ್ಲಿ ನೀಡಿದ್ದೇವೆ ಎಂದು ಅವರು ಹೇಳಿದರು.
ಈ ಬಗ್ಗೆ ತನಿಖೆ ಮಾಡುವಂತೆ ಪಾಲಿಕೆಯ ನೂತನ ಕಮಿಷನರ್ ಅವರಿಗೆ ಸತ್ಯಶೋಧನಾ ವರದಿ ನೀಡಿದ್ದೇವೆ. ನಾವು ದೂರು ಕೊಟ್ಟು ಸುಮ್ಮನೆ ಇರುವುದಿಲ್ಲ. ಅದು ನಿಜವೇ ಸುಳ್ಳೇ ಎಂಬ ಬಗ್ಗೆ ತನಿಖೆ ಮಾಡುತ್ತೇವೆ. ಪಚ್ಚನಾಡಿ, ಬಜಾಲ್, ಮದ್ಯದಲ್ಲಿರುವ ಎಸ್ ಟಿಪಿಯನ್ನು ನಿರ್ವಹಣೆ ಮಾಡಲು ಎಂಆರ್ ಪಿಎಲ್ ಕಂಪೆನಿಗೆ ಒಪ್ಪಿಸಬೇಕಿದೆ. ಇದರಿಂದ ನಿರ್ವಹಣೆ ವೆಚ್ಚ ಕಡಿಮೆಯಾಗುವುದಲ್ಲದೆ ಮಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತದೆ. ಮದ್ಯದಲ್ಲಿರುವ ಎಸ್ ಟಿಪಿಯಲ್ಲಿ ನೀರು ಶುದ್ಧೀಕರಣಗೊಳ್ಳುತ್ತಿಲ್ಲ. ಇದರಿಂದಾಗಿ ಅಲ್ಲಿಗೆ ಸಮೀಪದ ಖಂಡಿಗೆ ಎಂಬಲ್ಲಿ ತೋಡು, ಕೆರೆಯ ನೀರು ಕಲುಷಿತಗೊಂಡಿದೆ. ಇದರಿಂದಾಗಿ ವರ್ಷಕ್ಕೊಮ್ಮೆ ನಡೆಯುವ ಖಂಡಿಗೆ ಮೀನು ಹಿಡಿಯುವ ಜಾತ್ರೆಗೆ ಕಂಟಕ ಎದುರಾಗಿದೆ. ಕೆರೆಗೆ ಇಳಿದರೆ ಮಾರಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸೃಷ್ಟಿಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ನಿಮ್ಮ ಆಡಳಿತದಲ್ಲಿ ಹೀಗಿರಲಿಲ್ವಾ ಅಂತಾ ಕೇಳ್ತಾರೆ. ಹೌದು ನಮ್ಮ ಕಾಲದಲ್ಲಿ ಕೆರೆಯ ನೀರಲ್ಲಿ ಬಟ್ಟೆ ತೊಳೆಯುತ್ತಿದ್ದರು. ಮೀನು ಹಿಡಿಯುತ್ತಿದ್ದರು. ಈಗ ನೀರಿನ ಮೂಲಗಳಿಗೆ ಇಳಿಯುವ ಹಾಗೇ ಇಲ್ಲ. ಇದಕ್ಕೆ ಯಾರು ಹೊಣೆ? ಎಂದು ವಾಗ್ದಾಳಿ ನಡೆಸಿದರು.
ಮದ್ಯದ ಎಸ್ ಟಿಪಿ ಚಾಲನೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ. ಅಲ್ಲಿ 13 ಜನರಿಗೆ ನಿರ್ವಹಣೆಗೆ ಸಂಬಳ ನೀಡಲಾಗುತ್ತದೆ. ಆದರೆ ಯಾರೂ ಅಲ್ಲಿಲ್ಲ. ಕರೆಂಟ್ ಹೋದರೆ ಜನರೇಟರ್ ಇಲ್ಲ. ಒಂದು ಎಸ್ ಟಿಪಿಗೆ ವರ್ಷಕ್ಕೆ ಒಂದೂವರೆ ಕೋಟಿಯಂತೆ ಮೂರು ಎಸ್ ಟಿಪಿಗೆ ನಾಲ್ಕೂವರೆ ಕೋಟಿ ಹಣ ಪಡೆಯುತ್ತಾರೆ. ಇದೆಂತ ಸಾಧನೆ? ಇನ್ನಾದರೂ ಈ ಬಗ್ಗೆ ಕ್ರಮ ಜರುಗಿಸದೆ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಅನಿಲ್ ಕುಮಾರ್, ನವೀನ್ ಡಿಸೋಜ, ಅಶ್ರಫ್, ಲ್ಯಾನ್ಸ್ ಲಾಟ್ ಪಿಂಟೋ, ಪ್ರವೀಣ್ ಚಂದ್ರ ಆಳ್ವ, ಶಶಿಧರ್ ಹೆಗ್ಡೆ
ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು