8:29 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ, ಮೋದಿ ಕಾಲದಲ್ಲಿ ಎಷ್ಟು ಬಂತು ಶ್ವೇತಪತ್ರ ಹೊರಡಿಸಿ: ಸಿಎಂಗೆ ಸಿ.ಟಿ. ರವಿ ಆಗ್ರಹ

05/02/2024, 18:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ. 2004-2014ರವರೆಗೆ ಎಷ್ಟು ತೆರಿಗೆ ಹಣ ಬಂತು ಎನ್ನುವ ಕುರಿತು ಶ್ವೇತಪತ್ರ ಹೊರಡಿಸಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಕನ್ವೀನ್ಸ್ ಮಾಡಲು ಆಗದಿದ್ರೆ ಕನ್ಫ್ಯೂಸ್ ಮಾಡು. ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಮಾಡಿದ್ದು ಅದೇ ಎಂದರು.


ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಆವರು,
2014-2024 ಫೆಬ್ರವರಿವರೆಗೆ ಮೋದಿ ಕೊಟ್ಟ ತೆರಿಗೆ ಹಣ ಎಷ್ಟು ಹೇಳಿ. ಇಬ್ಬರ ಅಡಳಿತಾವಧಿಯಲ್ಲಿ ಅನುದಾನ-ಸಹಾಯಧನ ಎಷ್ಟು ಶ್ವೇತಪತ್ರ ಹೊರಡಿಸಿ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದರು.
2004-2014ರವರಗೆ ಕೇಂದ್ರದಿಂದ ಬಂದ ತೆರಿಗೆ ಹಣ 81795 ಕೋಟಿ. 2014-2023 ಡಿಸೆಂಬರ್ ವರೆಗೆ ಮೋದಿ ಕೊಟ್ಟಿದ್ದು 282791 ಕೋಟಿ.
2004-2014ರವರೆಗೆ ಸಿಂಗ್ ಕೊಟ್ಟ ಅನುದಾನ- ಸಹಾಯಧನ 60779 ಕೋಟಿ. 2014-2023ರವರಗೆ ಮೋದಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು 28832 ಕೋಟಿ. ಮೋದಿ ಕರ್ನಾಟಕಕ್ಕೆ ಹತ್ರತ್ರ ಮೂರುವರೆ ಲಕ್ಷ ಕೋಟಿ ಹಣ ನೀಡಿದ್ದಾರೆ ಎಂದು ರವಿ ನುಡಿದರು.
ಸಿಎಂ ಸಿದ್ದರಾಮಯಯ್ಯ ಒಂದು ದಿನವೂ ಜಿಎಸ್‍ಟಿ ಕೌನ್ಸಿಲ್ ಮೀಟಿಂಗ್ ಗೆ ಹೋಗಲಿಲ್ಲ. ನಾನೇಕೆ ಹೋಗಬೇಕು ಎಂಬ ಅಹಂಕಾರದಿಂದ ಒಂದು ದಿನವೂ ಮೀಟಿಂಗ್‍ಗೆ ಹೋಗಲಿಲ್ಲ.ಅನ್ಯಾಯವಾಗಿದ್ರೆ ಜಿಎಸ್‍ಟಿ ಮೀಟಿಂಗ್‍ನಲ್ಲಿ ಪ್ರಶ್ನೆ ಮಾಡಿ ನ್ಯಾಯ ಕೇಳಬಹುದಿತ್ತು ಎಂದು ಅವರು ನುಡಿದರು.
ಕೃಷ್ಣಭೈರೇಗೌಡ ಕೇಂದ್ರ ನೀತಿ ಎಲ್ಲಾ ಸಮಧಾನವಾಗಿದೆ ಎಂದು ಹೇಳಿ ಬರ್ತಾರೆ. ಹೊರಗಡೆ ಬಂದು ಕೇಂದ್ರಕ್ಕೆ ಬೈಯುತ್ತಾ ಸುಳ್ಳು ಹೇಳುತ್ತಾ ರಾಜಕಾರಣ ಮಾಡುತ್ತಾರೆ ಎಂದು ಮಾಜಿ ಸಚಿವರೂ ಆಗಿರುವ ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು