9:40 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ, ಮೋದಿ ಕಾಲದಲ್ಲಿ ಎಷ್ಟು ಬಂತು ಶ್ವೇತಪತ್ರ ಹೊರಡಿಸಿ: ಸಿಎಂಗೆ ಸಿ.ಟಿ. ರವಿ ಆಗ್ರಹ

05/02/2024, 18:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ. 2004-2014ರವರೆಗೆ ಎಷ್ಟು ತೆರಿಗೆ ಹಣ ಬಂತು ಎನ್ನುವ ಕುರಿತು ಶ್ವೇತಪತ್ರ ಹೊರಡಿಸಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಕನ್ವೀನ್ಸ್ ಮಾಡಲು ಆಗದಿದ್ರೆ ಕನ್ಫ್ಯೂಸ್ ಮಾಡು. ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಮಾಡಿದ್ದು ಅದೇ ಎಂದರು.


ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಆವರು,
2014-2024 ಫೆಬ್ರವರಿವರೆಗೆ ಮೋದಿ ಕೊಟ್ಟ ತೆರಿಗೆ ಹಣ ಎಷ್ಟು ಹೇಳಿ. ಇಬ್ಬರ ಅಡಳಿತಾವಧಿಯಲ್ಲಿ ಅನುದಾನ-ಸಹಾಯಧನ ಎಷ್ಟು ಶ್ವೇತಪತ್ರ ಹೊರಡಿಸಿ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದರು.
2004-2014ರವರಗೆ ಕೇಂದ್ರದಿಂದ ಬಂದ ತೆರಿಗೆ ಹಣ 81795 ಕೋಟಿ. 2014-2023 ಡಿಸೆಂಬರ್ ವರೆಗೆ ಮೋದಿ ಕೊಟ್ಟಿದ್ದು 282791 ಕೋಟಿ.
2004-2014ರವರೆಗೆ ಸಿಂಗ್ ಕೊಟ್ಟ ಅನುದಾನ- ಸಹಾಯಧನ 60779 ಕೋಟಿ. 2014-2023ರವರಗೆ ಮೋದಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು 28832 ಕೋಟಿ. ಮೋದಿ ಕರ್ನಾಟಕಕ್ಕೆ ಹತ್ರತ್ರ ಮೂರುವರೆ ಲಕ್ಷ ಕೋಟಿ ಹಣ ನೀಡಿದ್ದಾರೆ ಎಂದು ರವಿ ನುಡಿದರು.
ಸಿಎಂ ಸಿದ್ದರಾಮಯಯ್ಯ ಒಂದು ದಿನವೂ ಜಿಎಸ್‍ಟಿ ಕೌನ್ಸಿಲ್ ಮೀಟಿಂಗ್ ಗೆ ಹೋಗಲಿಲ್ಲ. ನಾನೇಕೆ ಹೋಗಬೇಕು ಎಂಬ ಅಹಂಕಾರದಿಂದ ಒಂದು ದಿನವೂ ಮೀಟಿಂಗ್‍ಗೆ ಹೋಗಲಿಲ್ಲ.ಅನ್ಯಾಯವಾಗಿದ್ರೆ ಜಿಎಸ್‍ಟಿ ಮೀಟಿಂಗ್‍ನಲ್ಲಿ ಪ್ರಶ್ನೆ ಮಾಡಿ ನ್ಯಾಯ ಕೇಳಬಹುದಿತ್ತು ಎಂದು ಅವರು ನುಡಿದರು.
ಕೃಷ್ಣಭೈರೇಗೌಡ ಕೇಂದ್ರ ನೀತಿ ಎಲ್ಲಾ ಸಮಧಾನವಾಗಿದೆ ಎಂದು ಹೇಳಿ ಬರ್ತಾರೆ. ಹೊರಗಡೆ ಬಂದು ಕೇಂದ್ರಕ್ಕೆ ಬೈಯುತ್ತಾ ಸುಳ್ಳು ಹೇಳುತ್ತಾ ರಾಜಕಾರಣ ಮಾಡುತ್ತಾರೆ ಎಂದು ಮಾಜಿ ಸಚಿವರೂ ಆಗಿರುವ ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು