7:15 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಾನವೀಯ ನೆಲೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಮರು ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

27/05/2023, 23:14

ಬೆಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಮಾನವೀಯತೆಯ ನೆಲೆಯಲ್ಲಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕ ನೆಲೆಯಲ್ಲಿ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿ ಮಾಡಲಾಗಿತ್ತು.
ಹಿಂದಿನ ಬಿಜೆಪಿ ಸರಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಸರಕಾರ
ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ ಹೀಗಾಗಿ ನೇಮಕಾತಿ ರದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು