12:13 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಾನವೀಯ ನೆಲೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಮರು ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

27/05/2023, 23:14

ಬೆಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಮಾನವೀಯತೆಯ ನೆಲೆಯಲ್ಲಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕ ನೆಲೆಯಲ್ಲಿ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿ ಮಾಡಲಾಗಿತ್ತು.
ಹಿಂದಿನ ಬಿಜೆಪಿ ಸರಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಸರಕಾರ
ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ ಹೀಗಾಗಿ ನೇಮಕಾತಿ ರದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು