8:44 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮನವಿಗಿಲ್ಲ ಸಿಎಂ ಪುರಸ್ಕಾರ: ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ರೋಹಿಣಿ ಸಿಂಧೂರಿ ನೇಮಕ

06/06/2021, 16:46

ಮಂಗಳೂರು(reporterkarnataka news): ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.ವರ್ಗಾವಣೆಗೆ ತಡೆ ನೀಡಬೇಕೆಂಬ ಸಿಂಧೂರಿ ಅವರ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುರಸ್ಕರಿಸಿಲ್ಲ.

ಸದಾ ವಿವಾದದ ಮೂಲಕ ಸುದ್ದಿಯಾಗುತ್ತಿದ್ದ ರೋಹಿಣಿ ಸಿಂಧೂರಿ ವಿರುದ್ಧ ರಾಜಕಾರಣಿಗಳು ಸೇರಿದಂತೆ ಕೆಲವು ಹಿರಿಯ ಅಧಿಕಾರಿಗಳು ಅಸಮಾಧಾನಗೊಂಡಿದ್ದರು. ಅವರ ವರ್ಗಾವಣೆಗೆ ಭಾರಿ ಪ್ರಯತ್ನವನ್ನು ಕೂಡ ನಡೆಸಿದ್ದರು. ಈ ನಡುವೆ ಜಿಲ್ಲಾಧಿಕಾರಿ ಸಿಂಧೂರಿ ಹಾಗೂ ಮೈಸೂರು ಮಹಾನಗರಪಾಲಿಕೆ ಕಮಿಷನರ್ ಶಿಲ್ಪಾ ನಾಗ್ ನಡುವೆ ಕಿತ್ತಾಟ ಆರಂಭವಾಯಿತು. ಶಿಲ್ಪಾ ನಾಗ್ ಅವರು ತನ್ನ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದರು. ಈ ನಡುವೆ ಇಬ್ಬರೂ ಅಧಿಕಾರಿಗಳ ವರ್ಗಾವಣೆ ನಡೆದಿದೆ.

ಇದೀಗ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಗೆ ನೇಮಿಸಲಾಗಿದೆ. ಸರಳ ಹಾಗೂ ಮೃದು ಸ್ವಭಾವದ ಪ್ರಾಮಾಣಿಕ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆಯ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು