6:36 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂದಾರ್ತಿ ಉದ್ಯಮಿಗೆ ಆನ್‌ಲೈನ್ ವಂಚನೆ: 3 ಮಂದಿ ಆರೋಪಿಗಳ ಬಂಧನ

18/09/2022, 10:32

ಉಡುಪಿ(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ದಿನ ಕಳೆದಂತೆ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಂದಾರ್ತಿ ಮೂಲದ ಉದ್ಯಮಿಯೋರ್ವರು 3 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಸಹಾಯ ಪಡೆಯುವ ನೆಪದಲ್ಲಿ ಉದ್ಯಮಿಗೆ ವಂಚನೆ ಮಾಡಲಾಗಿದೆ.

ಸೆ.4 ರಂದು ಅನಾಮಧೇಯ ವ್ಯಕ್ತಿಯೊಬ್ಬ ಯುರೋ ಬಾಂಡ್ ಕಂಪನಿಯ ಮಾಲೀಕನೆಂದು, ಯುರೋ ಬಾಂಡ್ ಡೀಲರ್ ಆಗಿರುವ ಮಂದಾರ್ತಿಯ ಉದ್ಯಮಿಯೊಬ್ಬರಿಗೆ ಕರೆ ಮಾಡಿ, ತನ್ನ ಮಗ ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾನೆ. ಮಗನನ್ನು ಮಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲು ತುರ್ತಾಗಿ 3 ಲಕ್ಷ ರೂ. ಹಣವನ್ನು ಖಾತೆಗೆ ಕಳುಹಿಸಿ ಕೊಡುವಂತೆ ಕೇಳಿಕೊಂಡಿದ್ದರು.

ಆ ಕರೆಗೆ ಸ್ಪಂದಿಸಿದ ಉದ್ಯಮಿ ತನ್ನ ಹಾಗೂ ಸ್ನೇಹಿತರ ಖಾತೆಯಿಂದ ಒಟ್ಟು 3 ಲಕ್ಷ ರೂ. ಹಣವನ್ನು ಆನ್‌ ಲೈನ್ ಮೂಲಕ ಹಾಕಿದ್ದರು. ನಂತರ ಅನುಮಾನಗೊಂಡು ಯುರೋ ಬಾಂಡ್ ಕಂಪನಿಗೆ ಸಂಪರ್ಕಿಸಿ ಮಾಹಿತಿ ಪಡೆದಾಗ ಉದ್ಯಮಿ ಮೋಸ ಹೋಗಿರುವುದು ತಿಳಿದು ಬಂದಿದೆ.

ಮೋಸ ಹೋಗಿರುವುದು ತಿಳಿದ ಕೂಡಲೇ ಉದ್ಯಮಿಯು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ವಂಚಕನ‌ ನಂಬರ್ ಟ್ರೇಸ್ ಮಾಡಿದಾಗ, ಗುಜರಾತ್ ರಾಜ್ಯದ ಸೂರತ್ ಪ್ರದೇಶದಲ್ಲಿ ತೋರಿಸುತ್ತಿತ್ತು. ಅವನು ಮಹಾರಾಷ್ಟ್ರ ಥಾಣೆ ಮೂಲದ ವ್ಯಕ್ತಿಯೊಬ್ಬನ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ತಿಳಿದುಬಂದಿದೆ. ಕೂಡಲೇ ಉಡುಪಿ ಪೊಲೀಸರ ತಂಡ, ಮಹಾರಾಷ್ಟ್ರಕ್ಕೆ ತೆರಳಿ ಆನ್​​ ಲೈನ್ ವಂಚನೆ ಮಾಡಿದ ವಂಚಕ ಹಾಗೂ ಆತನ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದು ಉಡುಪಿಗೆ ಕರೆ ತಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು