5:25 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂದಾರ್ತಿ ಉದ್ಯಮಿಗೆ ಆನ್‌ಲೈನ್ ವಂಚನೆ: 3 ಮಂದಿ ಆರೋಪಿಗಳ ಬಂಧನ

18/09/2022, 10:32

ಉಡುಪಿ(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ದಿನ ಕಳೆದಂತೆ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಂದಾರ್ತಿ ಮೂಲದ ಉದ್ಯಮಿಯೋರ್ವರು 3 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಸಹಾಯ ಪಡೆಯುವ ನೆಪದಲ್ಲಿ ಉದ್ಯಮಿಗೆ ವಂಚನೆ ಮಾಡಲಾಗಿದೆ.

ಸೆ.4 ರಂದು ಅನಾಮಧೇಯ ವ್ಯಕ್ತಿಯೊಬ್ಬ ಯುರೋ ಬಾಂಡ್ ಕಂಪನಿಯ ಮಾಲೀಕನೆಂದು, ಯುರೋ ಬಾಂಡ್ ಡೀಲರ್ ಆಗಿರುವ ಮಂದಾರ್ತಿಯ ಉದ್ಯಮಿಯೊಬ್ಬರಿಗೆ ಕರೆ ಮಾಡಿ, ತನ್ನ ಮಗ ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾನೆ. ಮಗನನ್ನು ಮಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲು ತುರ್ತಾಗಿ 3 ಲಕ್ಷ ರೂ. ಹಣವನ್ನು ಖಾತೆಗೆ ಕಳುಹಿಸಿ ಕೊಡುವಂತೆ ಕೇಳಿಕೊಂಡಿದ್ದರು.

ಆ ಕರೆಗೆ ಸ್ಪಂದಿಸಿದ ಉದ್ಯಮಿ ತನ್ನ ಹಾಗೂ ಸ್ನೇಹಿತರ ಖಾತೆಯಿಂದ ಒಟ್ಟು 3 ಲಕ್ಷ ರೂ. ಹಣವನ್ನು ಆನ್‌ ಲೈನ್ ಮೂಲಕ ಹಾಕಿದ್ದರು. ನಂತರ ಅನುಮಾನಗೊಂಡು ಯುರೋ ಬಾಂಡ್ ಕಂಪನಿಗೆ ಸಂಪರ್ಕಿಸಿ ಮಾಹಿತಿ ಪಡೆದಾಗ ಉದ್ಯಮಿ ಮೋಸ ಹೋಗಿರುವುದು ತಿಳಿದು ಬಂದಿದೆ.

ಮೋಸ ಹೋಗಿರುವುದು ತಿಳಿದ ಕೂಡಲೇ ಉದ್ಯಮಿಯು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ವಂಚಕನ‌ ನಂಬರ್ ಟ್ರೇಸ್ ಮಾಡಿದಾಗ, ಗುಜರಾತ್ ರಾಜ್ಯದ ಸೂರತ್ ಪ್ರದೇಶದಲ್ಲಿ ತೋರಿಸುತ್ತಿತ್ತು. ಅವನು ಮಹಾರಾಷ್ಟ್ರ ಥಾಣೆ ಮೂಲದ ವ್ಯಕ್ತಿಯೊಬ್ಬನ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ತಿಳಿದುಬಂದಿದೆ. ಕೂಡಲೇ ಉಡುಪಿ ಪೊಲೀಸರ ತಂಡ, ಮಹಾರಾಷ್ಟ್ರಕ್ಕೆ ತೆರಳಿ ಆನ್​​ ಲೈನ್ ವಂಚನೆ ಮಾಡಿದ ವಂಚಕ ಹಾಗೂ ಆತನ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದು ಉಡುಪಿಗೆ ಕರೆ ತಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು