1:23 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ 4 ಮಂದಿ ಸ್ಥಳದಲ್ಲೇ ದಾರುಣ ಸಾವು; ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಕಾರು

05/06/2023, 09:12

ವೈಷ್ಣವಿ ರಾಮೇಗೌಡ ಮದ್ದೂರು ಮಂಡ್ಯ

info.reporterkarnataka@gmail.com

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಲಾರಿಯೊಂದಕ್ಕೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಶರತ್, ನವೀನ್, ಹೇಮಂತ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ‌. ನೆಲಮಂಗಲದ ಈ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮುಂದುಗಡೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು