3:49 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

22/04/2025, 20:38

ಮಂಡ್ಯ(reporterkarnataka.com): ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
1984ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ ವರದಿಯಲ್ಲಿ ಶೇ.90ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.
*ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ:*
ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು