11:19 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

22/04/2025, 20:38

ಮಂಡ್ಯ(reporterkarnataka.com): ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
1984ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ ವರದಿಯಲ್ಲಿ ಶೇ.90ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.
*ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ:*
ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು