11:38 AM Saturday21 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

22/04/2025, 20:38

ಮಂಡ್ಯ(reporterkarnataka.com): ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
1984ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ ವರದಿಯಲ್ಲಿ ಶೇ.90ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.
*ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ:*
ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು