11:27 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

22/04/2025, 20:38

ಮಂಡ್ಯ(reporterkarnataka.com): ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
1984ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ ವರದಿಯಲ್ಲಿ ಶೇ.90ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.
*ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ:*
ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು