12:13 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

22/01/2022, 08:42

ಮಂಡ್ಯ(reporterkarnataka.com): ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಗೊತ್ತಾಗಿದೆ. ಇದರೊಂದಿಗೆ

ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್‌ಮುಲ್‌ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ.

ಕಳೆದ ವರ್ಷವಷ್ಟೇ ಮನ್‌ಮುಲ್‌‌ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ.

ಏನಿದು ಹಾಲಿಗೆ ರಾಸಾಯನಿಕ ಬೆರಕೆ.?: ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಟ್ಯಾಂಕರ್‌ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್‌ಮುಲ್‌ಗೆ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ನಿಜರೂಪ ಬಯಲಾಗಿದೆ.

ಹೇಗೆ ಬೆಳಕಿಗೆ ಬಂತು?: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್‌ಮುಲ್‌ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ. ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ. ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್‌ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು