4:24 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

22/01/2022, 08:42

ಮಂಡ್ಯ(reporterkarnataka.com): ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಗೊತ್ತಾಗಿದೆ. ಇದರೊಂದಿಗೆ

ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್‌ಮುಲ್‌ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ.

ಕಳೆದ ವರ್ಷವಷ್ಟೇ ಮನ್‌ಮುಲ್‌‌ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ.

ಏನಿದು ಹಾಲಿಗೆ ರಾಸಾಯನಿಕ ಬೆರಕೆ.?: ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಟ್ಯಾಂಕರ್‌ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್‌ಮುಲ್‌ಗೆ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ನಿಜರೂಪ ಬಯಲಾಗಿದೆ.

ಹೇಗೆ ಬೆಳಕಿಗೆ ಬಂತು?: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್‌ಮುಲ್‌ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ. ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ. ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್‌ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು