4:38 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಯಾವುದೇ ಅನ್ಯಾಯ ಎಸಗಿಲ್ಲ: ನೆಲ್ಲಿಗೆರೆ ಬಾಲು

05/07/2021, 07:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ನೆಲ್ಲಿಗೆರೆ ಬಾಲು ಹೇಳಿದರು.

ನಾಗಮಂಗಲದ ಶಾಸಕರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪರ ವಿರೋಧಗಳ ನಡುವೆ ಜಿಲ್ಲೆ, ತಾಲೂಕಿನಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಉಲ್ಲೇಖಿಸಿ ಮಾತನಾಡುತ್ತಾ,  ಅವರ ಅವಧಿಯಲ್ಲಿ ಕೆಲಸ ಕಾಮಗಾರಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಹಾಗೂ ಶಾಸಕರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕೆಂದು ಎಚ್ಚರಿಸಿದರು.

ರಾಜಕಾರಣದ ಭೀಷ್ಮ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಂದ ಯಾವ ಅನ್ಯಾಯವಾಗಿಲ್ಲ. ಅವರಿಂದ ಅಧಿಕಾರ ಅನುಭವಿಸಿ ಅವರ ವಿರುದ್ಧ ಧ್ವನಿ ಎತ್ತುತ್ತಿರುವುದು ಸರಿಯಿಲ್ಲ. ಆದರೆ ಇತ್ತೀಚಿನ ರಾಜಕಾರಣದಲ್ಲಿ ಹಾಲು ಒಕ್ಕೂಟದ ಪ್ರಕರಣವನ್ನು ಬಿಂಬಿಸುತ್ತಾ ಮುಂದಿನ ಚುನಾವಣೆಗಳಲ್ಲಿ ಜನರ ಮುಂದೆ ಹೋಗಲು ಈ ಪ್ರಕರಣವನ್ನು ಅಸ್ತ್ರವಾಗಿ ಬಳಸಿದರೆ ಜಿಲ್ಲೆ ಹಾಗೂ ತಾಲೂಕಿನ ಜನರು ಉತ್ತರ ಕೊಡಲು ಸಿದ್ಧರಾಗಿದ್ದಾರೆ ಎಂದು ಟಿ.ಕೆ ರಾಮೇಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರೇಗೌಡ, ನಾಗೇಶ್ ಬಸವೇಗೌಡ, ಪ್ರವೀಣ್  ಮೂಳಕಟ್ಟೆ, ಶಿವರಾಂ, ನಿತೀಶ್, ರಘು ಮುತ್ತಣ್ಣ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು