1:08 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಂಡ್ಯ: ಕೆ.ಆರ್.ಪೇಟೆಯಲ್ಲಿ ರಾಷ್ಟ್ರಪಿತ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಮಹೋತ್ಸವ

03/10/2022, 00:05

ಸೈಯ್ಯದ್ ಖಲೀಲ್ ಕೃಷ್ಣರಾಜಪೇಟೆ ಮಂಡ್ಯ

info.reporterkarnataka@gmail.com

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧ

ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು .

ತಹಶೀಲ್ದಾರ್ ಎಂ.ವಿ.ರೂಪ ಇಬ್ಬರೂ ಮಹನೀಯರ ಭಾವಚಿತ್ರಗಳಿಗೆ ವಿಶೇಷ ಪೂಜೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಹಿಂಸಾ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಜಾತಿ, ಮತ ಹಾಗೂ ಪಂಥಗಳಿಂದ ಮುಕ್ತವಾದ ಸಮಾನತೆಯಿಂದ ಕೂಡಿರುವ ಸಮ ಸಮಾಜವನ್ನು ನಿರ್ಮಾಣ ಮಾಡಲು ಪಣ ತೊಡಬೇಕು. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಒಂದಾಗಿ ದುಡಿಯಬೇಕು. ಗುಡಿ ಕೈಗಾರಿಕೆಗಳು ಹಾಗೂ ಸ್ವದೇಶಿ ಉತ್ಪನ್ನಗಳ ತಯಾರಿಕೆ ಹಾಗೂ ಮಾರಾಟಕ್ಕೆ ಒತ್ತು ನೀಡಬೇಕು ಎಂದು ಸಂದೇಶ ನೀಡಿ ನುಡಿದಂತೆ ನಡೆದು ಖಾದಿ ಉತ್ಪನ್ನಗಳನ್ನು ಬಳಸಿ ಮಾದರಿಯಾಗಿ ಜೀವನ ನಡೆಸಿದ ರಾಷ್ಟ್ರಪಿತನ ಜೀವನದ ಆದರ್ಶಗಳನ್ನು ಯುವಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. 

ದೇಶದ ಪ್ರಧಾನಮಂತ್ರಿಗಳಾಗಿ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಿದ ಶಾಸ್ತ್ರೀಜಿ ಅವರು ಭ್ರಷ್ಟಾಚಾರ ಮುಕ್ತವಾದ ದಕ್ಷ ಆಡಳಿತ ನೀಡಿ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದಾರೆ. ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆಯನ್ನು ಯುವಜನರು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ತಹಶೀಲ್ದಾರ್ ರೂಪ ಕರೆ ನೀಡಿದರು.

ಕೆ.ಆರ್.ಪೇಟೆ ತಾಲ್ಲೂಕು ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜೀವನ ಸಾಧನೆಯನ್ನು ಕುರಿತು ಮಾತನಾಡಿದರು. 

ಪುರಸಭೆ ಮುಖ್ಯಾಧಿಕಾರಿ ಕುಮಾರ್, ಅಗ್ನಿಶಾಮಕ ಠಾಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕಿ ನೀಲಾಮಣಿ, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ, ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ಮಂಡ್ಯ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಆರೋಗ್ಯ ಇಲಾಖೆಯ ರತ್ನ, ಉಪತಹಶೀಲ್ದಾರ್ ಲಕ್ಷ್ಮೀಕಾಂತ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು