5:47 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ

22/01/2025, 22:22

ಬೆಂಗಳೂರು(reporterkarnataka.com): ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ರೂ. 52 ಕೋಟಿ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌,‌ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಸಕರಾದ ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಡಣ್ಣಯ್ಯ, ಉದಯಗೌಡ, ರವಿಶಂಕರ್‌, ಹರೀಶ್‌ ಗೌಡ, ದಿನೇಶ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್‌ ಅಧ್ಯಕ್ಷ ಗಂಗಾಧರ್‌ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು