8:11 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ – ಮಗನ ಕುಟುಂಬಕ್ಕೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಭೇಟಿ

06/02/2025, 22:31

*ಪೊಲೀಸರು ಕೂಡ ಮೈಕ್ರೋ ಫೈನಾನ್ಸ್‌ಗೆ ಬೆಂಬಲ ನೀಡಿದ್ದಾರೆ*

ಮಂಡ್ಯ(reporterkarnataka.com): ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.
ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.

ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ. ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ. ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ. ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. *ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆ* ಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್‌ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್‌ ಹಾಗೂ ಪೊಲೀಸರು ಎಲ್ಲ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು. ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್‌ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು