1:44 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಡ್ಯ ಸಕ್ಕರೆ ಕಾರ್ಖಾನೆ ಖಾಸಗೀಕರಣ ಬೇಡ, ಹಾಲು ಒಕ್ಕೂಟದ ಪ್ರಕರಣ ತನಿಖೆಯಾಗಲಿ: ಮಾಜಿ ಸಂಸದ  ಶಿವರಾಮೇಗೌಡ

25/06/2021, 19:17

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ರಾಜ್ಯ ಬಿಜೆಪಿ ಸರಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಮಂತ್ರಿ ಮಂಡಲದ ಮಹನೀಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನರ ಹಿತವನ್ನು ಕಾಪಾಡಲು ಮರೆತಿದ್ದಾರೆ ಎಂದು ಮಂಡ್ಯ ಮಾಜಿ ಸಂಸದ ಶಿವರಾಮೇಗೌಡ ಹೇಳಿದರು.

ನಾಗಮಂಗಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ನಡೆಸುವ ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲಗೊಂಡಿದೆ. ರಾಜ್ಯದ ಪ್ರತಿನಿಧಿಗಳು ಭ್ರಷ್ಟಾಚಾರವನ್ನು ತೊಡಗಿದ್ದಾರೆ. ರಾಜ್ಯದ ಜನತೆಯ ಹಿತವನ್ನು ಯಾವ ಮಟ್ಟದಲ್ಲಿ ನಿರ್ವಹಣೆ ಮಾಡುತ್ತಾರೆ ಎಂಬುದನ್ನು ಮುಂದಿನ ಜನಾದೇಶದಲ್ಲಿ ಜನತಾ ನ್ಯಾಯಾಲಯದಲ್ಲಿ ತೀರ್ಪು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಮಂಡ್ಯದ ಸಕ್ಕರೆ ಕಾರ್ಖಾನೆ ಖಾಸಗೀಕರಣಕ್ಕೆ ಮಾಡಬಾರದೆಂಬುದು ಈಗಾಗಲೇ ಒತ್ತಾಯ ಮಾಡಲಾಗಿದೆ. ಮಂಡ್ಯ ಹಾಲು ಒಕ್ಕೂಟದ ಪ್ರಕರಣವನ್ನು ದೊಡ್ಡಮಟ್ಟದಲ್ಲಿ ತನಿಖೆ ಮಾಡಿ ತಪ್ಪಿತಸ್ಥರು ಯಾರೇ ಆದರೂ   ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು..

ಇದೇ ಸಂದರ್ಭದಲ್ಲಿ ಲಾರಿ ಚೆನ್ನಪ್ಪ. ವಕೀಲರಾದ .ಟಿ.ಕೆ. ರಾಮೇಗೌಡ, ಕೊಪ್ಪ ತಮ್ಮಯ್ಯ, ಚೇತು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು