3:50 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಮಂಡ್ಯ: ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಣೆ; ಮಲೆಮಹಾದೇಶ್ವರರ ಮಹಾಕುಂಭ ಮೇಳಕ್ಕೆ ಚಾಲನೆ

17/10/2022, 11:11

ಮಂಡ್ಯ(reporterkarnataka.com)
ಇಂದು ಮಂಡ್ಯ ಜಿಲ್ಲೆಯ ಕೆ. ಆರ್‌. ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರ ಗ್ರಾಮಗಳ ಕಾವೇರಿ – ಹೇಮಾವತಿ – ಲಕ್ಷ್ಮಣ ತೀರ್ಥ ಪವಿತ್ರ ತ್ರಿವೇಣಿ ಸಂಗಮದಲ್ಲಿ ಬಾಗಿನ ಅರ್ಪಿಸಿ, ನಾಲ್ಕು ದಿನಗಳ ಐತಿಹಾಸಿಕ ಶ್ರೀ ಮಲೆಮಹಾದೇಶ್ವರರ ಮಹಾಕುಂಭಮೇಳದ ಉದ್ಘಾಟನೆ ಭಾನುವಾರ ನೆರವೇರಿಸಲಾಯಿತು.


ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಜಿ, ಉಸ್ತುವಾರಿ ಸಚಿವ
ಗೋಪಾಲಯ್ಯ ಜಿ, ನಾರಾಯಣ ಗೌಡ,ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಭಾಗವಹಿಸಿ ಮಾತನಾಡಿದರು.

ಸಮಾರಂಭದಲ್ಲಿ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು.

ಮಲೆ ಮಹಾದೇಶ್ವರರು ಶ್ರೀಶೈಲದಿಂದ ಬಂದಾಗ ಪಾದಸ್ಪರ್ಶ ಮಾಡಿದ್ದ ಪವಿತ್ರ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಬಹಳ ವಿಶೇಷ. ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಧಾರ್ಮಿಕ ಕಾರಿಡಾರ್ ಗಳನ್ನು ಅಭಿವೃದ್ಧಿಗೊಳಿಸುವತ್ತ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಸಿ. ಎನ್. ಅಶ್ವತನಾರಾಯಣ ಜಿ, ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು