4:59 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ ಡಿಮ್ಯಾಂಡ್; ದೂರು ದಾಖಲು

13/12/2025, 18:14

ಗಿರಿಧರ್ ಕೊಂಪುಳಿರ ಮಡಿಕೇರಿ

info.repprterkarnataka@gmail.com

ಸಾಮಾಜಿಕ ಜಾಲತಾಣದಿಂದ ಮಡಿಕೇರಿಯ ಆಂಟಿ ಯೊಂದಿಗೆ ಸ್ನೇಹ ಬೆಳೆದು ಭೇಟಿ ಮಾಡಲೆಂದು ಮಂಡ್ಯದ ಮದ್ದೂರುನಿಂದ ಬಂದಿದ್ದ ವ್ಯಕ್ತಿಯೊಬ್ಬನಿಗೆ ಕಳೆದ ರಾತ್ರಿ ಹಿಗ್ಗಾಮುಗ್ಗ ಥಳಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮೂವರು ಯುವಕರು ಹಾಗೂ ಆಂಟಿ ಸೇರಿ ಮಂಡ್ಯದ ವ್ಯಕ್ತಿಯನ್ನು ಹನಿ ಟ್ರ್ಯಾಪ್ ಮಾಡಿದ್ದು ಮಡಿಕೇರಿಯ ಮಂಗಳಾದೇವಿ ನಗರದ ಆಂಟಿ ಮನೆಯಲ್ಲಿ ಲಾಕ್ ಮಾಡಿ ಬೆಳಗ್ಗಿನ ವರೆಗೂ ಹಿಂಸೆ ನೀಡಿದ್ದು ಬಳಿಕ ಅರೆ ಬೆತ್ತಲಾಗಿ ಯುವಕ ತಪ್ಪಿಸಿಕೊಂಡು ಬಂದು ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದ್ದಾನೆ.


ನಿನ್ನೆ ರಾತ್ರಿ ಮಂಡ್ಯ ಜಿಲ್ಲೆ ಮದ್ದೂರಿನ ಯುವಕ ಮಹದೇವ ಎಂಬುವನನ್ನು ಮನೆಯಲ್ಲಿ ಕೂಡಿಹಾಕಿ ಮೂವರು ಹಣದ ಬೇಡಿಕೆ ಇಟ್ಟು ರಾತ್ರಿ ಇಡೀ ಅತನನ್ನು ಥಳಿಸಿದ್ದಾರೆ. ಇಂದು ಬೆಳಗ್ಗೆ ಅತ ತಪ್ಪಿಸಿಕೊಂಡು ಓಡಿ ಬರುತ್ತಿದ್ದಾಗ, ಆಟೋರಿಕ್ಷದಲ್ಲಿ ಆತನನ್ನು ಹಿಂಬಾಲಿಸಿ ಕಿಡ್ನಾಪ್ ಮಾಡಲು ಕೂಡ ಯತ್ನಿಸಿ, ಅಲ್ಲಿಂದಲೂ ತಪ್ಪಿಸಿಕೊಂಡು ಠಾಣೆಗೆ ಬಂದಿದ್ದಾನೆ ಎಂದು ಹೇಳಲಾಗಿದೆ.
ಮಡಿಕೇರಿ ನಗರ ಠಾಣೆಯಲ್ಲಿ ಯುವಕನ ದೂರು ಸ್ವೀಕರಿಸಿ ವಿಚಾರಣೆ ಕೈಗೊಂಡ ಪೊಲೀಸರು ಮಹಿಳೆ ಮತ್ತು ಯುವಕರ ಪತ್ತೆಗೆ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು