8:55 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ ಡಿಮ್ಯಾಂಡ್; ದೂರು ದಾಖಲು

13/12/2025, 18:14

ಗಿರಿಧರ್ ಕೊಂಪುಳಿರ ಮಡಿಕೇರಿ

info.repprterkarnataka@gmail.com

ಸಾಮಾಜಿಕ ಜಾಲತಾಣದಿಂದ ಮಡಿಕೇರಿಯ ಆಂಟಿ ಯೊಂದಿಗೆ ಸ್ನೇಹ ಬೆಳೆದು ಭೇಟಿ ಮಾಡಲೆಂದು ಮಂಡ್ಯದ ಮದ್ದೂರುನಿಂದ ಬಂದಿದ್ದ ವ್ಯಕ್ತಿಯೊಬ್ಬನಿಗೆ ಕಳೆದ ರಾತ್ರಿ ಹಿಗ್ಗಾಮುಗ್ಗ ಥಳಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮೂವರು ಯುವಕರು ಹಾಗೂ ಆಂಟಿ ಸೇರಿ ಮಂಡ್ಯದ ವ್ಯಕ್ತಿಯನ್ನು ಹನಿ ಟ್ರ್ಯಾಪ್ ಮಾಡಿದ್ದು ಮಡಿಕೇರಿಯ ಮಂಗಳಾದೇವಿ ನಗರದ ಆಂಟಿ ಮನೆಯಲ್ಲಿ ಲಾಕ್ ಮಾಡಿ ಬೆಳಗ್ಗಿನ ವರೆಗೂ ಹಿಂಸೆ ನೀಡಿದ್ದು ಬಳಿಕ ಅರೆ ಬೆತ್ತಲಾಗಿ ಯುವಕ ತಪ್ಪಿಸಿಕೊಂಡು ಬಂದು ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದ್ದಾನೆ.


ನಿನ್ನೆ ರಾತ್ರಿ ಮಂಡ್ಯ ಜಿಲ್ಲೆ ಮದ್ದೂರಿನ ಯುವಕ ಮಹದೇವ ಎಂಬುವನನ್ನು ಮನೆಯಲ್ಲಿ ಕೂಡಿಹಾಕಿ ಮೂವರು ಹಣದ ಬೇಡಿಕೆ ಇಟ್ಟು ರಾತ್ರಿ ಇಡೀ ಅತನನ್ನು ಥಳಿಸಿದ್ದಾರೆ. ಇಂದು ಬೆಳಗ್ಗೆ ಅತ ತಪ್ಪಿಸಿಕೊಂಡು ಓಡಿ ಬರುತ್ತಿದ್ದಾಗ, ಆಟೋರಿಕ್ಷದಲ್ಲಿ ಆತನನ್ನು ಹಿಂಬಾಲಿಸಿ ಕಿಡ್ನಾಪ್ ಮಾಡಲು ಕೂಡ ಯತ್ನಿಸಿ, ಅಲ್ಲಿಂದಲೂ ತಪ್ಪಿಸಿಕೊಂಡು ಠಾಣೆಗೆ ಬಂದಿದ್ದಾನೆ ಎಂದು ಹೇಳಲಾಗಿದೆ.
ಮಡಿಕೇರಿ ನಗರ ಠಾಣೆಯಲ್ಲಿ ಯುವಕನ ದೂರು ಸ್ವೀಕರಿಸಿ ವಿಚಾರಣೆ ಕೈಗೊಂಡ ಪೊಲೀಸರು ಮಹಿಳೆ ಮತ್ತು ಯುವಕರ ಪತ್ತೆಗೆ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು