1:55 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮನೆ ಬಾಗಿಲಿಗೆ ಬಂದ ದೈತ್ಯ ಮೊಸಳೆ!: ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು!!

12/06/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೇಸಿಗೆ ಹೊಡೆತಕ್ಕೆ ದಿನದಿಂದ ದಿನಕ್ಕೆ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ನದಿ ಒಡಲಿನಿಂದ ಮೊಸಳೆಗಳು ಆಹಾರಗಳನ್ನು ಆರಿಸಿ ರೈತರ ತೋಟದ ವಸತಿ ಪ್ರದೇಶಕ್ಕೆ ಆಗಮಿಸಿದ್ದು,ಗ್ರಾಮಸ್ಥರು ಭೀತಿಗೊಂಡಿದ್ದಾರೆ.
ರೈತರಿಗೆ ಒಂದು ಕಡೆ ತಮ್ಮ ಪ್ರಾಣದ ಭೀತಿ ಎದುರಾದರೆ, ಇನ್ನೊಂದು ಕಡೆ ತಮ್ಮ ಪ್ರಾಣಿಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಬೃಹದಾಕಾರದ ಮೊಸಳೆಯನ್ನು ಗಿಡಕ್ಕೆ ಕಟ್ಟಿಹಾಕಿ ಅಪಾಯಕಾರಿ ಸಾಹಸವನ್ನು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ದರ್ಗಾ ಗ್ರಾಮದ ನದಿ ತೀರದ ಜನ ವಸತಿ ಪ್ರದೇಶಗಳಿಗೆ ನಸುಕಿನ ಜಾವ 3 ಗಂಟೆ ಆಸುಪಾಸಿನಲ್ಲಿ ಪ್ರಕಾಶ ಸನದಿ ಎಂಬುವರ ಮನೆಯ ಬಳಿ ದೈತ್ಯಾಕಾರದ ಮೊಸಳೆ ಪತ್ತೆಯಾಗಿತ್ತು. ಇದೇ ವೇಳೆ ರೈತರು ಸಾಕಿರುವ ಪ್ರಾಣಿಗಳ ಮೇಲೆ ದಾಳಿ ಮಾಡಕ್ಕೆ ಮುಂದಾಗುತ್ತಿದ್ದಂತೆ ಕುಟುಂಬಸ್ಥರು ದೊಣ್ಣೆಯಿಂದ ಮೊಸಳೆಯನ್ನು ಹೊಡೆದು ಅಕ್ಕ ಪಕ್ಕದ ರೈತರು ಒಟ್ಟಾಗಿ ಮೊಸಳೆಯನ್ನು ಕಟ್ಟಾಕಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮೊಸಳೆಯನ್ನು ರಕ್ಷಣೆ ಕಾರ್ಯ ಮಾಡಿದ್ದಾರೆ.


ಇದೆ ವೇಳೆ ರೈತ ಪ್ರಕಾಶ ಸನದಿ ಮಾತನಾಡಿ, ನಸುಕಿನ ಮೂರು ಗಂಟೆಗೆ ಮೊಸಳೆ ಮನೆಗೆ ಬಂದಿತ್ತು, ನಮ್ಮ ಆಡಿನ ಮರಿಯನ್ನು ಮೊಸಳೆ ಹಿಡಿದಿತ್ತು. ಅವಾಗ ಮೇಕೆಗಳ ಚೀರಾಟ ಮಾಡುತ್ತಿದ್ದಂತೆ ನಾವು ಎಚ್ಚೆತ್ತುಕೊಂಡು ನಾವು ಮೊಸಳೆ ಬಾಯಿಂದ ನಮ್ಮ ಆಡದ ಮರಿಯನ್ನು ರಕ್ಷಣೆ ಮಾಡಿದ್ದೆವು, ನಂತರ ತೊಟದ ಜನರು ಸೇರಿ ಮೊಸಳೆಯನ್ನು ಹಗ್ಗದ ಸಹಾಯದಿಂದ ಮರಕ್ಕೆ ಕಟ್ಟಿಹಾಕಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ನದಿಯಲ್ಲಿ ನೀರು ಕಡಿಮೆ ಆಗುತ್ತಿದ್ದಂತೆ ಮೊಸಳೆಗಳು ಕೃಷಿ ಜಮೀನಿನಲ್ಲಿ ಬರುತ್ತಿದ್ದಾವೇ ನಮಗೆ ತುಂಬಾ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನದಿ ತೀರದಲ್ಲಿ ಇದ್ದು ನಮಗೆ ರಕ್ಷಣೆ ನೀಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು