2:53 AM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಮನೆ ಬಾಗಿಲಿಗೆ ಬಂದ ದೈತ್ಯ ಮೊಸಳೆ!: ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು!!

12/06/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೇಸಿಗೆ ಹೊಡೆತಕ್ಕೆ ದಿನದಿಂದ ದಿನಕ್ಕೆ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ನದಿ ಒಡಲಿನಿಂದ ಮೊಸಳೆಗಳು ಆಹಾರಗಳನ್ನು ಆರಿಸಿ ರೈತರ ತೋಟದ ವಸತಿ ಪ್ರದೇಶಕ್ಕೆ ಆಗಮಿಸಿದ್ದು,ಗ್ರಾಮಸ್ಥರು ಭೀತಿಗೊಂಡಿದ್ದಾರೆ.
ರೈತರಿಗೆ ಒಂದು ಕಡೆ ತಮ್ಮ ಪ್ರಾಣದ ಭೀತಿ ಎದುರಾದರೆ, ಇನ್ನೊಂದು ಕಡೆ ತಮ್ಮ ಪ್ರಾಣಿಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಬೃಹದಾಕಾರದ ಮೊಸಳೆಯನ್ನು ಗಿಡಕ್ಕೆ ಕಟ್ಟಿಹಾಕಿ ಅಪಾಯಕಾರಿ ಸಾಹಸವನ್ನು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ದರ್ಗಾ ಗ್ರಾಮದ ನದಿ ತೀರದ ಜನ ವಸತಿ ಪ್ರದೇಶಗಳಿಗೆ ನಸುಕಿನ ಜಾವ 3 ಗಂಟೆ ಆಸುಪಾಸಿನಲ್ಲಿ ಪ್ರಕಾಶ ಸನದಿ ಎಂಬುವರ ಮನೆಯ ಬಳಿ ದೈತ್ಯಾಕಾರದ ಮೊಸಳೆ ಪತ್ತೆಯಾಗಿತ್ತು. ಇದೇ ವೇಳೆ ರೈತರು ಸಾಕಿರುವ ಪ್ರಾಣಿಗಳ ಮೇಲೆ ದಾಳಿ ಮಾಡಕ್ಕೆ ಮುಂದಾಗುತ್ತಿದ್ದಂತೆ ಕುಟುಂಬಸ್ಥರು ದೊಣ್ಣೆಯಿಂದ ಮೊಸಳೆಯನ್ನು ಹೊಡೆದು ಅಕ್ಕ ಪಕ್ಕದ ರೈತರು ಒಟ್ಟಾಗಿ ಮೊಸಳೆಯನ್ನು ಕಟ್ಟಾಕಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮೊಸಳೆಯನ್ನು ರಕ್ಷಣೆ ಕಾರ್ಯ ಮಾಡಿದ್ದಾರೆ.


ಇದೆ ವೇಳೆ ರೈತ ಪ್ರಕಾಶ ಸನದಿ ಮಾತನಾಡಿ, ನಸುಕಿನ ಮೂರು ಗಂಟೆಗೆ ಮೊಸಳೆ ಮನೆಗೆ ಬಂದಿತ್ತು, ನಮ್ಮ ಆಡಿನ ಮರಿಯನ್ನು ಮೊಸಳೆ ಹಿಡಿದಿತ್ತು. ಅವಾಗ ಮೇಕೆಗಳ ಚೀರಾಟ ಮಾಡುತ್ತಿದ್ದಂತೆ ನಾವು ಎಚ್ಚೆತ್ತುಕೊಂಡು ನಾವು ಮೊಸಳೆ ಬಾಯಿಂದ ನಮ್ಮ ಆಡದ ಮರಿಯನ್ನು ರಕ್ಷಣೆ ಮಾಡಿದ್ದೆವು, ನಂತರ ತೊಟದ ಜನರು ಸೇರಿ ಮೊಸಳೆಯನ್ನು ಹಗ್ಗದ ಸಹಾಯದಿಂದ ಮರಕ್ಕೆ ಕಟ್ಟಿಹಾಕಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ನದಿಯಲ್ಲಿ ನೀರು ಕಡಿಮೆ ಆಗುತ್ತಿದ್ದಂತೆ ಮೊಸಳೆಗಳು ಕೃಷಿ ಜಮೀನಿನಲ್ಲಿ ಬರುತ್ತಿದ್ದಾವೇ ನಮಗೆ ತುಂಬಾ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನದಿ ತೀರದಲ್ಲಿ ಇದ್ದು ನಮಗೆ ರಕ್ಷಣೆ ನೀಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು