7:47 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮನೆ ಬಾಗಿಲಿಗೆ ಬಂದ ದೈತ್ಯ ಮೊಸಳೆ!: ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು!!

12/06/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೇಸಿಗೆ ಹೊಡೆತಕ್ಕೆ ದಿನದಿಂದ ದಿನಕ್ಕೆ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ನದಿ ಒಡಲಿನಿಂದ ಮೊಸಳೆಗಳು ಆಹಾರಗಳನ್ನು ಆರಿಸಿ ರೈತರ ತೋಟದ ವಸತಿ ಪ್ರದೇಶಕ್ಕೆ ಆಗಮಿಸಿದ್ದು,ಗ್ರಾಮಸ್ಥರು ಭೀತಿಗೊಂಡಿದ್ದಾರೆ.
ರೈತರಿಗೆ ಒಂದು ಕಡೆ ತಮ್ಮ ಪ್ರಾಣದ ಭೀತಿ ಎದುರಾದರೆ, ಇನ್ನೊಂದು ಕಡೆ ತಮ್ಮ ಪ್ರಾಣಿಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಬೃಹದಾಕಾರದ ಮೊಸಳೆಯನ್ನು ಗಿಡಕ್ಕೆ ಕಟ್ಟಿಹಾಕಿ ಅಪಾಯಕಾರಿ ಸಾಹಸವನ್ನು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ದರ್ಗಾ ಗ್ರಾಮದ ನದಿ ತೀರದ ಜನ ವಸತಿ ಪ್ರದೇಶಗಳಿಗೆ ನಸುಕಿನ ಜಾವ 3 ಗಂಟೆ ಆಸುಪಾಸಿನಲ್ಲಿ ಪ್ರಕಾಶ ಸನದಿ ಎಂಬುವರ ಮನೆಯ ಬಳಿ ದೈತ್ಯಾಕಾರದ ಮೊಸಳೆ ಪತ್ತೆಯಾಗಿತ್ತು. ಇದೇ ವೇಳೆ ರೈತರು ಸಾಕಿರುವ ಪ್ರಾಣಿಗಳ ಮೇಲೆ ದಾಳಿ ಮಾಡಕ್ಕೆ ಮುಂದಾಗುತ್ತಿದ್ದಂತೆ ಕುಟುಂಬಸ್ಥರು ದೊಣ್ಣೆಯಿಂದ ಮೊಸಳೆಯನ್ನು ಹೊಡೆದು ಅಕ್ಕ ಪಕ್ಕದ ರೈತರು ಒಟ್ಟಾಗಿ ಮೊಸಳೆಯನ್ನು ಕಟ್ಟಾಕಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮೊಸಳೆಯನ್ನು ರಕ್ಷಣೆ ಕಾರ್ಯ ಮಾಡಿದ್ದಾರೆ.


ಇದೆ ವೇಳೆ ರೈತ ಪ್ರಕಾಶ ಸನದಿ ಮಾತನಾಡಿ, ನಸುಕಿನ ಮೂರು ಗಂಟೆಗೆ ಮೊಸಳೆ ಮನೆಗೆ ಬಂದಿತ್ತು, ನಮ್ಮ ಆಡಿನ ಮರಿಯನ್ನು ಮೊಸಳೆ ಹಿಡಿದಿತ್ತು. ಅವಾಗ ಮೇಕೆಗಳ ಚೀರಾಟ ಮಾಡುತ್ತಿದ್ದಂತೆ ನಾವು ಎಚ್ಚೆತ್ತುಕೊಂಡು ನಾವು ಮೊಸಳೆ ಬಾಯಿಂದ ನಮ್ಮ ಆಡದ ಮರಿಯನ್ನು ರಕ್ಷಣೆ ಮಾಡಿದ್ದೆವು, ನಂತರ ತೊಟದ ಜನರು ಸೇರಿ ಮೊಸಳೆಯನ್ನು ಹಗ್ಗದ ಸಹಾಯದಿಂದ ಮರಕ್ಕೆ ಕಟ್ಟಿಹಾಕಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ನದಿಯಲ್ಲಿ ನೀರು ಕಡಿಮೆ ಆಗುತ್ತಿದ್ದಂತೆ ಮೊಸಳೆಗಳು ಕೃಷಿ ಜಮೀನಿನಲ್ಲಿ ಬರುತ್ತಿದ್ದಾವೇ ನಮಗೆ ತುಂಬಾ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನದಿ ತೀರದಲ್ಲಿ ಇದ್ದು ನಮಗೆ ರಕ್ಷಣೆ ನೀಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು