3:51 AM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಮನೆ ಬಾಗಿಲಿಗೆ ಬಂದ ದೈತ್ಯ ಮೊಸಳೆ!: ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು!!

12/06/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೇಸಿಗೆ ಹೊಡೆತಕ್ಕೆ ದಿನದಿಂದ ದಿನಕ್ಕೆ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ನದಿ ಒಡಲಿನಿಂದ ಮೊಸಳೆಗಳು ಆಹಾರಗಳನ್ನು ಆರಿಸಿ ರೈತರ ತೋಟದ ವಸತಿ ಪ್ರದೇಶಕ್ಕೆ ಆಗಮಿಸಿದ್ದು,ಗ್ರಾಮಸ್ಥರು ಭೀತಿಗೊಂಡಿದ್ದಾರೆ.
ರೈತರಿಗೆ ಒಂದು ಕಡೆ ತಮ್ಮ ಪ್ರಾಣದ ಭೀತಿ ಎದುರಾದರೆ, ಇನ್ನೊಂದು ಕಡೆ ತಮ್ಮ ಪ್ರಾಣಿಗಳನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಬೃಹದಾಕಾರದ ಮೊಸಳೆಯನ್ನು ಗಿಡಕ್ಕೆ ಕಟ್ಟಿಹಾಕಿ ಅಪಾಯಕಾರಿ ಸಾಹಸವನ್ನು ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ದರ್ಗಾ ಗ್ರಾಮದ ನದಿ ತೀರದ ಜನ ವಸತಿ ಪ್ರದೇಶಗಳಿಗೆ ನಸುಕಿನ ಜಾವ 3 ಗಂಟೆ ಆಸುಪಾಸಿನಲ್ಲಿ ಪ್ರಕಾಶ ಸನದಿ ಎಂಬುವರ ಮನೆಯ ಬಳಿ ದೈತ್ಯಾಕಾರದ ಮೊಸಳೆ ಪತ್ತೆಯಾಗಿತ್ತು. ಇದೇ ವೇಳೆ ರೈತರು ಸಾಕಿರುವ ಪ್ರಾಣಿಗಳ ಮೇಲೆ ದಾಳಿ ಮಾಡಕ್ಕೆ ಮುಂದಾಗುತ್ತಿದ್ದಂತೆ ಕುಟುಂಬಸ್ಥರು ದೊಣ್ಣೆಯಿಂದ ಮೊಸಳೆಯನ್ನು ಹೊಡೆದು ಅಕ್ಕ ಪಕ್ಕದ ರೈತರು ಒಟ್ಟಾಗಿ ಮೊಸಳೆಯನ್ನು ಕಟ್ಟಾಕಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮೊಸಳೆಯನ್ನು ರಕ್ಷಣೆ ಕಾರ್ಯ ಮಾಡಿದ್ದಾರೆ.


ಇದೆ ವೇಳೆ ರೈತ ಪ್ರಕಾಶ ಸನದಿ ಮಾತನಾಡಿ, ನಸುಕಿನ ಮೂರು ಗಂಟೆಗೆ ಮೊಸಳೆ ಮನೆಗೆ ಬಂದಿತ್ತು, ನಮ್ಮ ಆಡಿನ ಮರಿಯನ್ನು ಮೊಸಳೆ ಹಿಡಿದಿತ್ತು. ಅವಾಗ ಮೇಕೆಗಳ ಚೀರಾಟ ಮಾಡುತ್ತಿದ್ದಂತೆ ನಾವು ಎಚ್ಚೆತ್ತುಕೊಂಡು ನಾವು ಮೊಸಳೆ ಬಾಯಿಂದ ನಮ್ಮ ಆಡದ ಮರಿಯನ್ನು ರಕ್ಷಣೆ ಮಾಡಿದ್ದೆವು, ನಂತರ ತೊಟದ ಜನರು ಸೇರಿ ಮೊಸಳೆಯನ್ನು ಹಗ್ಗದ ಸಹಾಯದಿಂದ ಮರಕ್ಕೆ ಕಟ್ಟಿಹಾಕಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ನದಿಯಲ್ಲಿ ನೀರು ಕಡಿಮೆ ಆಗುತ್ತಿದ್ದಂತೆ ಮೊಸಳೆಗಳು ಕೃಷಿ ಜಮೀನಿನಲ್ಲಿ ಬರುತ್ತಿದ್ದಾವೇ ನಮಗೆ ತುಂಬಾ ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನದಿ ತೀರದಲ್ಲಿ ಇದ್ದು ನಮಗೆ ರಕ್ಷಣೆ ನೀಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು