9:33 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮನೆ ಬಾಗಿಲಿಗೆ ವೈದ್ಯಕೀಯ ಸೇವೆ: ನಾಳೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ: ಡಾ ಮಲ್ಲಿಕಾರ್ಜುನ ಹಂಜಿ

02/02/2024, 13:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕರ್ನಾಟಕದ ಇತಿಹಾಸದಲ್ಲಿ ಪ್ರತಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆಯನ್ನು ಕೊಟ್ಟಿದ್ದು ಕೆಎಲ್ಇ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಜವಾಹರ ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಎಂಬುವುದು ಹೆಮ್ಮೆಯ ವಿಷಯ, ಅದೇ ಸೇವೆಯನ್ನು ತಾಲೂಕಿನ ಪ್ರತಿಯೊಬ್ಬ ವ್ಯಕ್ತಿಗೂ ನೀಡುವ ಉದ್ದೇಶದಿಂದ ಬರುವ ಶನಿವಾರ 3 ರಂದು ತಾಲೂಕಿನ ತೆಲಸಂಗ ಗ್ರಾಮದ ಬಿ ವಿ ಸಂಘದ ಶಾಲೆಯಲ್ಲಿ ಅಮೀತ ಪ್ರಭಾಕರ ಕೋರೆ ಅಭಿಮಾನಿ ಬಳಗ, ಕೆಎಲ್ಇ ವೈದ್ಯಕೀಯ ಸಂಸ್ಥೆ ಹಾಗೂ ಜೆ ಎನ್ ಎಮ್ ಸಿ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವೈದ್ಯ ಡಾ ಮಲ್ಲಿಕಾರ್ಜುನ ಹಂಜಿ ಅವರು ಹೇಳಿದರು.
ಅವರು ಸ್ಥಳೀಯ ಎಸ್ ಎಸ್ ಎನ್ ಎಸ್ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಈ ಬೃಹತ್ ಆರೋಗ್ಯ ಶಿಬಿರದಲ್ಲಿ ಹೃದಯ ರೋಗ, ಹೃದಯ ಶಸ್ತ್ರ ಚಿಕಿತ್ಸೆ, ಮೂತ್ರಕೋಶ, ಮೂತ್ರಪಿಂಡ ಚಿಕಿತ್ಸೆ, ಗ್ಯಾಸ್ಕೋ ಸರ್ಜರಿ, ಮಧುಮೇಹ ಚಿಕಿತ್ಸೆ, ನೇತ್ರ ಶಸ್ತ್ರ ಚಿಕಿತ್ಸೆಣ ಶ್ವಾಸಕೋಶ ಚಿಕಿತ್ಸೆ, ಎಲುಬು ಕೀಲು ಮರುಜೋಡನೆ, ಕಿವಿ ಮೂಗು ಗಂಟಲು ಚಿಕಿತ್ಸೆ, ಕ್ಯಾನ್ಸರ್ ರೋಗ ಚಿಕಿತ್ಸೆ, ಸ್ತ್ರೀ ರೋಗ ಚಿಕಿತ್ಸೆ, ಚಿಕ್ಕಮಕ್ಕಳ ಚಿಕಿತ್ಸೆ, ಚರ್ಮರೋಗ ಚಿಕಿತ್ಸೆ, ದಂತರೋಗ ಚಿಕಿತ್ಸೆ ಸೇರಿದಂತೆ ಅನೇಕ ಗಂಭೀರ ಚಿಕಿತ್ಸೆಗಳನ್ನೂ ಸಹ ಮಾಡುವ ವ್ಯವಸ್ಥೆ ಮಾಡಲಾಗಿದೆ.
ಹಲವು ರೋಗಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು ಗಂಭೀರ ಚಿಕಿತ್ಸೆಗಳಿಗಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಪಾಸ್ ಕೊಟ್ಟು ಕಳಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ, ಅಲ್ಲಿ ಬರುವ ಪ್ರತಿಯೊಬ್ಬ ವ್ಯಕ್ತಿಗೆ ಊಟದ ವ್ಯವಸ್ಥೆ ಮಾಡಿದ್ದು ಪ್ರತಿಯೊಬ್ಬ ಸಾರ್ವಜನಿಕರು ಅಮೀತ ಪ್ರಭಾಕರ ಕೋರೆ ಅಭಿಮಾನಿ ಬಳಗದ ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆಸಿಕೊಳ್ಳಿ ಎಂದು ಸಲಹೆ ನೀಡಿದರು.


ಈ ವೇಳೆ ಶಂಭು ಮಮದಾಪೂರ, ವಿಜಯ ಬುರ್ಲಿ, ಡಾ ಅಲ್ಲಂಪ್ರಭು, ಅಲ್ಲಪ್ಪ ನಿಡೋಣಿ, ರಾಜು ಹಾದಿಮನಿ, ಅಶೋಕ ಬುರ್ಲಿ, ಪ್ರಕಾಶ ಪಾಟೀಲ, ಎಸ್ ಜಿ ಸಲಗರೆ, ಬಿ ಎಸ್ ಕಾಂಬಳೆ, ಶಿವು ಹಂಜಿ ಸೇರಿದಂತೆ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು